ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರತಿ ಗಂಟೆಗೆ ಬ್ಯಾಂಕ್ ವಂಚನೆಯಿಂದ 2 ಲಕ್ಷ ನಷ್ಟ: ಕರ್ನಾಟಕ ಮೂರನೇ ಸ್ಥಾನದಲ್ಲಿ

ಹಣಕಾಸು ವಹಿವಾಟುಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನಿಖರತೆ ತರಲು ಡಿಜಿಟಲ್ ವಹಿವಾಟುಗಳಿಗೆ ...

ಬೆಂಗಳೂರು: ಹಣಕಾಸು ವಹಿವಾಟುಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನಿಖರತೆ ತರಲು ಡಿಜಿಟಲ್ ವಹಿವಾಟುಗಳಿಗೆ ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವ ಮಧ್ಯೆ ಸೈಬರ್ ಅಪರಾಧ ಮತ್ತು ವಂಚನೆ ಪ್ರಕರಣಗಳು ದೇಶಾದ್ಯಂತ ನಡೆಯುತ್ತಲೇ ಇದೆ. ಅಂಕಿಅಂಶ ಪ್ರಕಾರ, ವಂಚನೆಗಾರರಿಂದ ಪ್ರತಿ ಗಂಟೆಗೆ 2 ಲಕ್ಷ ರೂಪಾಯಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳು ಮತ್ತು ಇಂಟರ್ನೆಟ್ ಬ್ಯಾಂಕುಗಳ ಮೂಲಕ ಜನರು ಕಳೆದುಕೊಳ್ಳುತ್ತಿದ್ದಾರೆ.
ಕ್ರೆಡಿಟ್ ಕಾರ್ಡು/ಡೆಬಿಟ್ ಕಾರ್ಡು ಮತ್ತು ಇಂಟರ್ನೆಟ್ ಬ್ಯಾಂಕು ವಂಚನೆಗಳನ್ನು ನಿಯಂತ್ರಿಸಲು ಪ್ರಯತ್ನಗಳನ್ನು ಮಾಡುತ್ತಿದ್ದರೂ ಕೂಡ ಕಳೆದ ವರ್ಷ ದೇಶದಲ್ಲಿ 178 ಕೋಟಿ ರೂಪಾಯಿ ಕಳವು ಮಾಡಲಾಗಿದೆ.
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇದುವರೆಗೆ ವಂಚನೆಯಾದ ಅತಿ ಹೆಚ್ಚಿನ ಮೌಲ್ಯವಾಗಿದೆ. ಇತ್ತೀಚೆಗೆ ವಂಚನೆಗಳಿಂದ ಪ್ರತಿದಿನ ಸುಮಾರು 48 ಲಕ್ಷ ಕಳೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಸಚಿವಾಲಯದ ಅಂಕಿಅಂಶ ಹೇಳುತ್ತದೆ. ಬ್ಯಾಂಕುಗಳು ಕಳೆದ ವರ್ಷ ಡಿಸೆಂಬರ್ 21ರವರೆಗೆ ಸಲ್ಲಿಸಿದ ಹಣ ವಂಚನೆ ಅಕ್ರಮದ ಬಗ್ಗೆ ಸಲ್ಲಿಸಿದ ವರದಿ ತಿಳಿಸುತ್ತದೆ.
ಇನ್ನು ಕ್ರೆಡಿಟ್/ಡೆಬಿಟ್ ಕಾರ್ಡುಗಳು ಮತ್ತು ಇಂಟರ್ನೆಟ್ ಬ್ಯಾಂಕು ವಂಚನೆ 2016-17ರ ಆರ್ ಬಿಐ ವರದಿ ಪ್ರಕಾರ, ಕರ್ನಾಟಕ ದೇಶದಲ್ಲಿ ಮೂರನೇ ಸ್ಥಾನ ಹೊಂದಿದೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕರ್ನಾಟಕದಲ್ಲಿ 221 ಕೇಸುಗಳು ದಾಖಲಾಗಿದ್ದು 9.16 ಕೋಟಿ ರೂಪಾಯಿ  ವಂಚನೆಯಾಗಿದೆ. ಮಹಾರಾಷ್ಟ್ರದಲ್ಲಿ ಕಳೆದ ವರ್ಷ 12.10 ಕೋಟಿ ರೂಪಾಯಿ ವಂಚನೆಯಾಗಿದೆ. ದಾಖಲೆಗಳ ಪ್ರಕಾರ, ಕರ್ನಾಟಕದಲ್ಲಿ ಸೈಬರ್ ಅಪರಾಧ ಕಳೆದ ಮೂರು ವರ್ಷಗಳಲ್ಲಿ ಜಾಸ್ತಿಯಾಗಿದೆ. 2014-15ರಲ್ಲಿ ಒಟ್ಟು 91 ಕೇಸುಗಳು ದಾಖಲಾಗಿವೆ. ಒಟ್ಟು 4.3 ಕೋಟಿ ವಂಚನೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT