ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಾಟಾಳ್ ನಾಗರಾಜ್, ಕನ್ನಡ ಒಕ್ಕೂಟ ಕಾರ್ಯಕರ್ತರು ಮತ್ತು ರೈತರು 
ರಾಜ್ಯ

ಫ್ಲಾಪ್ ಶೋ ಆದ ಕನ್ನಡ ಒಕ್ಕೂಟದ ಕರಾಳ ದಿನ: ಫ್ರೀಡಂ ಪಾರ್ಕ್ ನಲ್ಲಿ ಕೇವಲ 100 ಮಂದಿ!

ಮಹದಾಯಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಣ ಬಿಕ್ಕಟ್ಟನ್ನು ....

ಬೆಂಗಳೂರು: ಮಹದಾಯಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಣ ಬಿಕ್ಕಟ್ಟನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಪ್ರಧಾನಿಯವರು ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕನ್ನಡ ಒಕ್ಕೂಟ ಕರೆ ನೀಡಿದ್ದ ಕರಾಳ ದಿನ ವಿಫಲವಾಗಿದೆ.
ಕನ್ನಡ ಒಕ್ಕೂಟ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸುಮಾರು 100 ಮಂದಿಯಷ್ಟೆ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರಿಗಿಂತ ಹೆಚ್ಚು ಮಂದಿ ಪೊಲೀಸ್ ಸಿಬ್ಬಂದಿ ಭದ್ರತೆ ಕಾರಣಗಳಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು.
ಕನ್ನಡ ಒಕ್ಕೂಟ ಮತ್ತು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಹೋರಾಟಗಾರ ಕೆಆರ್ ಕುಮಾರ್ ಮತ್ತು ಇನ್ನೂ ಕೆಲವರು ನಿನ್ನೆ ಮಧ್ಯಾಹ್ನದ ವೇಳೆಗೆ ಫ್ರೀಡಂ ಪಾರ್ಕ್ ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಬಿಜೆಪಿ ಸಮಾವೇಶದಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿಯವರು ಮಹದಾಯಿ ಜಲ ವಿವಾದ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಹೇಳಿದರು. ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮಹದಾಯಿ ಜಲ ವಿವಾದ ಕುರಿತು ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು.
ಪ್ರಧಾನಿಯಾದ ಬಳಿಕ ಕರ್ನಾಟಕಕ್ಕೆ ಮೋದಿಯವರು ಬರುತ್ತಿರುವುದು ಇದು ಐದನೇ ಬಾರಿ. ಆದರೆ ಇದುವರೆಗೆ ಅವರು ಕಾವೇರಿ ಜಲ ವಿವಾದವಾಗಲಿ, ಮಹದಾಯಿ ಜಲ ವಿವಾದ ಕುರಿತಾಗಲಿ ಮಾತನಾಡಿಲ್ಲ. ರಾಜ್ಯಕ್ಕೆ ಯಾವುದೇ ಅಭಿವೃದ್ಧಿಪರ ಯೋಜನೆಗಳನ್ನು ಪ್ರಕಟಿಸಿಲ್ಲ. ಮಹದಾಯಿ ವಿಷಯ ಕುರಿತು ಅವರ ನಿಲುವೇನೆಂದು ಇಂದು ಬಿಜೆಪಿ ಕಾರ್ಯಕ್ರಮದಲ್ಲಿ ಅವರು ಪ್ರಕಟಿಸಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.
ಪ್ರಧಾನಿಯವರು ಇಂದು ಭಾಷಣದಲ್ಲಿ ಮಹದಾಯಿ ಕುರಿತು ಪ್ರಸ್ತಾಪಿಸದಿದ್ದರೆ ಕನ್ನಡ ಒಕ್ಕೂಟದಿಂದ ಅಭ್ಯರ್ಥಿಗಳನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲಾಗುವುದು. ವಿಧಾನಸಭೆಯಲ್ಲಿ ನಮ್ಮ ಕನಿಷ್ಟ 50 ಅಭ್ಯರ್ಥಿಗಳು ಇದ್ದರೆ ರಾಜ್ಯದ ರೈತರು ಮತ್ತು ಜಲ ಸಮಸ್ಯೆ ಬಗೆಹರಿಸಲು ಸಾಧ್ಯವಾಗಬಹುದು ಎಂದರು.
ಸಾಯಂಕಾಲ 4.30ರ ವೇಳೆಗೆ ಪೊಲೀಸರು ಅರಮನೆ ಮೈದಾನಕ್ಕೆ ರ್ಯಾಲಿ ಹೋಗಲು ಪ್ರಯತ್ನಿಸಿದ ಒಕ್ಕೂಟದ ಮುಖಂಡರನ್ನು ಪೊಲೀಸರು ಬಂಧಿಸಿದರು.ಸುಮಾರು 40 ಮಂದಿ ಪ್ರತಿಭಟನಾಕಾರರನ್ನು ಆಡುಗೋಡಿ ಕಾರ್ ಮೈದಾನಕ್ಕೆ ಕರೆದುಕೊಂಡು ಹೋಗಿ ನಂತರ ಸಂಜೆ ಬಿಡುಗಡೆ ಮಾಡಿದರು.
ಮೌನಿಬಾಬಾ ಆಗಬೇಡಿ, ಚಂಪಾ: ಮಹದಾಯಿ ಜಲ ವಿವಾದದಲ್ಲಿ ಪ್ರಧಾನಿ ಮೋದಿಯವರು ತಮ್ಮ ದಿವ್ಯ ಮೌನ ಮುರಿಯಬೇಕು. ಅದು ಒಳ್ಳೆಯದಾಗಲಿ, ಕೆಟ್ಟ ರೀತಿಯಿಂದಲಾದರೂ ಆಗಲಿ ಮೋದಿಯವರು ಪ್ರತಿಕ್ರಿಯೆ ನೀಡಬೇಕು. ಅವರು ಮೌನಿಬಾಬಾ ಆಗಬಾರದು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕನ್ನಡ ಸಾಹಿತಿ ಚಂಪಾ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT