ಮಹದಾಯಿ ವಿವಾದ: ನ್ಯಾಯಾಧಿಕರಣ ವಿಚಾರಣೆ ಫೆ.8ಕ್ಕೆ ಮುಂದೂಡಿಕೆ 
ರಾಜ್ಯ

ಮಹದಾಯಿ ವಿವಾದ: ನ್ಯಾಯಾಧಿಕರಣ ವಿಚಾರಣೆ ಫೆ.8ಕ್ಕೆ ಮುಂದೂಡಿಕೆ

ಮಹದಾಯಿ ನೀರು ಹಂಚಿಕೆ ಸಂಬಂಧ ನ್ಯಾಯಮಂಡಳಿಯ ವಿಚಾರಣೆಯು ಫೆ.8ಕ್ಕೆ ಮುಂದೂಡಲ್ಪಟ್ಟಿದೆ.

ಬೆಂಗಳೂರು: ಮಹದಾಯಿ ನೀರು ಹಂಚಿಕೆ ಸಂಬಂಧ ನ್ಯಾಯಾಧಿಕರಣ ವಿಚಾರಣೆಯು ಫೆ.8ಕ್ಕೆ ಮುಂದೂಡಲ್ಪಟ್ಟಿದೆ.
ನೀರು ಹಂಚಿಕೆ ವಿವಾದ ಕುರಿತು ಕರ್ನಾಟಕದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಫೆ.13ಕ್ಕೆ ಮಂದೂಡಿದ ನ್ಯಾಯಾಧಿಕರಣ ಉಳಿದ ಪ್ರಕರಣದ ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ವಾದ ಮಂಡನೆಗಾಗಿ ಗೋವಾ ಸರ್ಕಾರ ಕಾಲಾವಕಾಶ ಕೇಳದ ಕಾರಣ ವಿಚಾರಣೆ ಮುಂದೂಡಲಾಗಿದ್ದು ಫೆ.22ರ ಒಳಗೆ ವಾದ ಮಂಡನೆ ಸಂಪೂರ್ಣಗೊಳಿಸಬೇಕೆಂದು ಆದೇಶ ನೀಡಿದೆ.
ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ ನಡೆಸಬೇಕು. ನ್ಯಾಯಮಂಡಳಿಗೆ  ಈ ವಿಚಾರದಲ್ಲಿ ವಿಚಾರಣೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಹೇಳಿತ್ತು. ಆದರೆ ಗೋವಾ ವಕೀಲರು ನ್ಯಾಯಾಂಗ ನಿಂದನೆ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿ ಹೇಳಿದ್ದರು. ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಾಧ್ಯಸಾಧ್ಯತೆಗಳ ಬಗ್ಗೆ ಫೆ.13ರೊಳಗೆ ತಿಳಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT