ಸಾಂದರ್ಭಿಕ ಚಿತ್ರ 
ರಾಜ್ಯ

ಜನಪ್ರತಿನಿಧಿಗಳ ಮಕ್ಕಳಿಗೆ ಸರ್ಕಾರಿ ಶಾಲಾ ಶಿಕ್ಷಣ ಕಡ್ಡಾಯ, ಶುಕ್ರವಾರದ ಅಧಿವೇಶನದಲ್ಲಿ ಚರ್ಚೆ ಸಾಧ್ಯತೆ

ಸರ್ಕಾರಿ ನೌಕರರು ಮತ್ತು ಚುನಾಯಿತ ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಕಾನೂನು ಜಾರಿ ಮಾಡುವಂತೆ ಕೋರಿ ...........

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಚುನಾಯಿತ ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ  ಸರ್ಕಾರಿ ಶಾಲೆಗಳಿಗೆ ಕಳಿಸಬೇಕೆಂದು ಕಾನೂನು ಜಾರಿ ಮಾಡುವಂತೆ ಕೋರಿ ಖಾಸಗಿ ಮಸೂದೆ ಒಂದು ಇದೇ ಶುಕ್ರವಾರದ ಅದಿವೇಶನದಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ.
ಶಾಸನಸಭೆಯ ಸದಸ್ಯರಾದ ರಘು ಆಚಾರ್ ಈ ಮಸೂದೆ ಸಿದ್ದಪಡಿಸಿದ್ದು 2017 ಅಕ್ಟೋಬರ್.ನವೆಂಬರ್ ನ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಆಗುವುದಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸ್ಪೀಕರ್ ಡಿ.ಎಚ್. ಶಂಕರಮೂರ್ತಿ ಈ ಮಸೂದೆ ಮಂಡನೆಗೆ ಅವಕಾಶ ನೀಡಿರಲಿಲ್ಲ.
"ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶುಕ್ರವಾರ ಅದಿವೇಶನದಲ್ಲಿ ಈ ಮಸೂದೆ ಚರ್ಚೆಗೆ ತೆರೆದುಕೊಳ್ಳಲಿದೆ. ಇದಾಗಲೇ ಮಸೂದೆ ಪ್ರತಿಯನ್ನು ಸ್ಪೀಕರ್ ಅವರಿಗೆ ನಾನು ತಲುಪಿಸಿದ್ದೇನೆ.  ಈ ಅಧಿವೇಶನದಲ್ಲಿಯೂ ಅವರು ಮಸೂದೆಯ ಕುರಿತು ಚರ್ಚಿಸಲು ಅನುಮತಿಸದಿದ್ದಲ್ಲಿ, ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ" ರಘು ಆಚಾರ್ ಹೇಳಿದ್ದಾರೆ. "ಫೆಬ್ರವರಿ ಅಧಿವೇಶನದಲ್ಲಿ ಮಸೂದೆಯನ್ನು ಚರ್ಚೆಗೆ ತೆಗೆದುಕೊಳ್ಳುವುದಾಗಿ ಖುದ್ದು  ಸ್ಪೀಕರ್ ನನಗೆ ಭರವಸೆ ನೀಡಿದ್ದರು. ಅವರು ಹೇಳಿದ್ದ ಮಾತನ್ನು ಉಳಿಸಿಕೊಳ್ಳದಿದ್ದರೆ ನಾನು ನ್ಯಾಯಾಲಯಕ್ಕೆ ತೆರಳುತ್ತೇನೆ."
ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಟ್ ಸಹ ಈ ಮಸೂದೆಯ ಬಗೆಗೆ ಉತ್ಸುಕರಾಗಿದ್ದಾರೆ. "ಮಸೂದೆ ಅಂಗೀಕಾರವಾದರೆ, ಸರ್ಕಾರವು ಅದನ್ನು ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ನಿಯಮಗಳನ್ನು ರೂಪಿಸಲು ಸಂತಸ ತಾಳುತ್ತದೆ. " ಅವರು ಹೇಳಿದರು.
ಈ ಮಸೂದೆಯು ರಾಜ್ಯದ ಸರ್ಕಾರಿ ಶಾಲೆಗಳ ಚಿತ್ರಣವನ್ನು ಬದಲಿಸಲಿದೆ.  ಶಿಕ್ಷಕರು ಮತ್ತು ಪೋಷಕರು, ಸಾಮಾನ್ಯ ವರ್ಗವನ್ನು ಒಳಗೊಂಡಂತೆ ಅನೇಕರಿಗೆ ಖಾಸಗಿ ಮಸೂದೆ ಬಗೆಗೆ ಒಲವಿದೆ. ಇಷ್ಟೇ ಅಲ್ಲದೆ ಮಸೂದೆಯು ಹಲವಾರು ರಾಜಕೀಯ ಪಕ್ಷಗಳಿಂದ ಬೆಂಬಲವನ್ನು ಪಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT