ಕರ್ನಾಟಕ ಹೈಕೋರ್ಟ್ 
ರಾಜ್ಯ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಮಹೇಶ್ವರಿ ನೇಮಕ ಸಾಧ್ಯತೆ

ನ್ಯಾ.ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶ ಹೊರಡಿಸಿದ್ದಾರೆ...

ಬೆಂಗಳೂರು: ನ್ಯಾ.ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶ ಹೊರಡಿಸಿದ್ದಾರೆ. 
ಸುಪ್ರೀಂಕೋರ್ಟ್'ನ ಮೊದಲ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಕೊಲಿಜಿಯಂ ಇತ್ತೀಚೆಗಷ್ಟೇ ನ್ಯಾ.ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್'ಗೆ ವರ್ಗಾಯಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು. 
ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಪ್ರಕಟಿಸಲಾಗಿದೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ. 
ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಪ್ರಸಕ್ತ ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು. ಫೆ.20ರೊಳಗೆ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಹುದ್ದೆ ಸ್ವೀಕರಿಸಬೇಕೆಂದು ರಾಷ್ಟ್ರಪತಿಗಳು ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಜ.10ರಂದು ಸಭೆ ಸೇರಿದ್ದ ಸುಪ್ರೀಂಕೋರ್ಟ್'ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಕೊಲಿಜಿಯಂ ನ್ಯಾ.ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್'ಗೆ ವರ್ಗಾಯಿಸುವ ತೀರ್ಮಾನ ಕೈಗೊಂಡಿತ್ತು. 
ರಾಜ್ಯ ಹೈಕೋರ್ಟ್'ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ. ರಮೇಶ್ ಅವರು, ನ್ಯಾ.ದಿನೇಶ್ ಮಹೇಶ್ವರಿ ಅವರಿಗಿಂತ ಹೆಚ್ಚಿನ ಹಿರಿತನ ಹೊಂದಿದ್ದರೂ ನ್ಯಾ.ರಮೇಶ್ ಈ ಹಿಂದೆ ಮುಖ್ಯ ನ್ಯಾಯಮೂರ್ತಿ ಸ್ಥಾನ ನಿರಾಕರಿಸಿದ್ದ ಹಿನ್ನಲೆಯಲ್ಲಿ ಈ ನೇಮಕ ಶಿಫಾರಸು ಮಾಡಲಾಗಿದೆ ಎಂದು ಕೊಲಿಜಿಯಂ ಹೇಳಿತ್ತು. 
ದಿನೇಶ್ ಮಹೇಶ್ವರ್ ಅವರು ಮೇ.15 1958ರಲ್ಲಿ ಜನಿಸಿದ್ದರು. ಅವರ ತಂದೆ ದಿ.ರಮೇಶ್ ಚಂದ್ರ ಮಹೇಶ್ವರಿ ಅವರು ರಾಜಸ್ತಾನ ರಾಜ್ಯದ ಹೈಕೋರ್ಟ್ ಪ್ರಮುಖ ವಕೀಲರಾಗಿದ್ದರು. ಜೈಪುರದ ಮಹಾರಾಜ ಕಾಲೇಜಿನಲ್ಲಿ ಬಿ.ಎಸ್.ಸಿಯಲ್ಲಿ ಪದವಿ ಪಡೆದ ದಿನೇಶ್ ಅವರು, ನಂತರ 1980ರಲ್ಲಿ ಜೋಧ್ಪುರ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದು ಮಾರ್ಚ್.8 1981ರಂದು ತಮ್ಮ ವಕೀಲ ವೃತ್ತಿಯನ್ನು ಪ್ರಾರಂಭಿಸಿದ್ದರು.  ಮಹೇಶ್ವರಿಯವರು ಪ್ರಮುಖವಾಗಿ ಸಿವಿಲ್ ಮತ್ತು ಸಾಂವಿಧಾನಿಕ ವಿಷಯಗಳಲ್ಲಿ ಅಧ್ಯಯನ ಮಾಡಿದವರಾಗಿದ್ದಾರೆ. 2004ರಲ್ಲಿ ರಾಜಸ್ತಾನ ಹೈಕೋರ್ಟ್'ನಲ್ಲಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ.ದಿನೇಶ್, ಬಳಿಕ 2016ಕ್ಕೆ ಮೇಘಾಲಯದ ಮುಖ್ಯ ನ್ಯಾಯಮೂರ್ತಿಯಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!