ಸಂಗ್ರಹ ಚಿತ್ರ 
ರಾಜ್ಯ

ಪರೇಶ್ ಮೇಸ್ತಾ ಸಾವು ಪ್ರಕರಣ; ಭಟ್ಕಳದಲ್ಲಿ ಮತ್ತೋರ್ವ ಆರೋಪಿಯ ಬಂಧನ

ಕಾರವಾರದ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಕರಾವಳಿ ಪೊಲೀಸರು ಮಂಗಳವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾರವಾರ: ಕಾರವಾರದ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಕರಾವಳಿ ಪೊಲೀಸರು ಮಂಗಳವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಭಟ್ಕಳದ ಶಿರಾಲಿ ಎಂಬಲ್ಲಿ ಆಶಿಫ್ ರಫೀಕ್ ಎಂಬಾತನನ್ನು ಕರಾವಳಿ ಪೊಲೀಸರು ಬಂಧಿಸಿದ್ದು, ಪ್ರಕರಣದ ಮೂರನೇ ಶಂಕಿತ ವ್ಯಕ್ತಿಯನ್ನು ಶೀಘ್ರ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.  ಈಗಾಗಲೇ ಪರೇಶ್ ಮೇಸ್ತಾ ಹತ್ಯೆ ಸಂಬಂಧ ತನಿಖೆ ಚುರುಕುಗೊಳಿಸಿರುವ ತನಿಖಾಧಿಕಾರಿಗಳು, ಮತ್ತಿಬ್ಬರು ಶಂಕಿತ ಆರೋಪಿಗಳ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ಇಬ್ಬರ ಬಂಧನಕ್ಕೂ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಳೆದ ಡಿಸೆಂಬರ್ ನಲ್ಲಿ ಆಜಾದ್ ಅಣ್ಣೀಗೇರಿ ಮತ್ತು ಫೆಬ್ರವರಿ 2ರಂದು ಶಿವಮೊಗ್ಗದ ಸಾಗರದಲ್ಲಿ ಜಿಮ್ ಸಲೀಂ ಎಂಬುವವರನ್ನು  ಬಂಧಿಸಿದ್ದರು. ಈ ಪೈಕಿ ಜಿಮ್ ಸಲೀಂ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನಿಂದಲೇ ಪ್ರಕರಣದ ಮತ್ತಷ್ಟು ಮಾಹಿತಿ ಬಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಅವರು, ಪರೇಶ್ ಮೇಸ್ತಾ ಸಾವಿನ ಬಳಿಕ ಕರಾವಳಿಯಲ್ಲಿ ಉಂಟಾಗಿದ್ದ ಗಲಭೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಮೂವರ ವಿರುದ್ಧ  ಶಂಕೆ ಮೇರೆಗೆ ತನಿಖೆ ನಡೆಸಲಾಗುತ್ತಿದ್ದು, ಈ ವರೆಗೂ ಪರೇಶ್ ಮೇಸ್ತಾ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿ ಲಭ್ಯವಾಗಿಲ್ಲ. ಹೀಗಾಗಿ ತನಿಖೆ ಕೊಂಚ ತಡವಾಗಿದ್ದು, ವರದಿ ದೊರೆತ ಬಳಿಕ ತನಿಖೆ ಚುರುಕುಗೊಳ್ಳುತ್ತದೆ  ಎಂದು ಹೇಳಿದ್ದಾರೆ.
ಇನ್ನು ಪರೇಶ್ ಮೇಸ್ತಾ ಸಾವಿನ ಬಳಿಕ ಪೊಲೀಸರು ಕೈಗೊಂಡಿದ್ದ ಕೆಲ ನಿರ್ಣಯಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದವು. ಪ್ರಮುಖವಾಗಿ ಪರೇಶ್ ಮೇಸ್ತಾ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಖಾಸಗಿ ಆಸ್ಪತ್ರೆ ಕಸ್ತೂರಬಾ  ವೈದ್ಯಕೀಯ ಕಾಲೇಜು, ಮಣಿಪಾಲದಲ್ಲಿ ನಡೆಸಿದ್ದು ಪ್ರಶ್ನಾರ್ಥಕವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT