ಸಂಗ್ರಹ ಚಿತ್ರ 
ರಾಜ್ಯ

ಪರೇಶ್ ಮೇಸ್ತಾ ಸಾವು ಪ್ರಕರಣ; ಭಟ್ಕಳದಲ್ಲಿ ಮತ್ತೋರ್ವ ಆರೋಪಿಯ ಬಂಧನ

ಕಾರವಾರದ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಕರಾವಳಿ ಪೊಲೀಸರು ಮಂಗಳವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾರವಾರ: ಕಾರವಾರದ ಪರೇಶ್ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಕರಾವಳಿ ಪೊಲೀಸರು ಮಂಗಳವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಭಟ್ಕಳದ ಶಿರಾಲಿ ಎಂಬಲ್ಲಿ ಆಶಿಫ್ ರಫೀಕ್ ಎಂಬಾತನನ್ನು ಕರಾವಳಿ ಪೊಲೀಸರು ಬಂಧಿಸಿದ್ದು, ಪ್ರಕರಣದ ಮೂರನೇ ಶಂಕಿತ ವ್ಯಕ್ತಿಯನ್ನು ಶೀಘ್ರ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.  ಈಗಾಗಲೇ ಪರೇಶ್ ಮೇಸ್ತಾ ಹತ್ಯೆ ಸಂಬಂಧ ತನಿಖೆ ಚುರುಕುಗೊಳಿಸಿರುವ ತನಿಖಾಧಿಕಾರಿಗಳು, ಮತ್ತಿಬ್ಬರು ಶಂಕಿತ ಆರೋಪಿಗಳ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ಇಬ್ಬರ ಬಂಧನಕ್ಕೂ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಳೆದ ಡಿಸೆಂಬರ್ ನಲ್ಲಿ ಆಜಾದ್ ಅಣ್ಣೀಗೇರಿ ಮತ್ತು ಫೆಬ್ರವರಿ 2ರಂದು ಶಿವಮೊಗ್ಗದ ಸಾಗರದಲ್ಲಿ ಜಿಮ್ ಸಲೀಂ ಎಂಬುವವರನ್ನು  ಬಂಧಿಸಿದ್ದರು. ಈ ಪೈಕಿ ಜಿಮ್ ಸಲೀಂ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನಿಂದಲೇ ಪ್ರಕರಣದ ಮತ್ತಷ್ಟು ಮಾಹಿತಿ ಬಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಅವರು, ಪರೇಶ್ ಮೇಸ್ತಾ ಸಾವಿನ ಬಳಿಕ ಕರಾವಳಿಯಲ್ಲಿ ಉಂಟಾಗಿದ್ದ ಗಲಭೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಮೂವರ ವಿರುದ್ಧ  ಶಂಕೆ ಮೇರೆಗೆ ತನಿಖೆ ನಡೆಸಲಾಗುತ್ತಿದ್ದು, ಈ ವರೆಗೂ ಪರೇಶ್ ಮೇಸ್ತಾ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿ ಲಭ್ಯವಾಗಿಲ್ಲ. ಹೀಗಾಗಿ ತನಿಖೆ ಕೊಂಚ ತಡವಾಗಿದ್ದು, ವರದಿ ದೊರೆತ ಬಳಿಕ ತನಿಖೆ ಚುರುಕುಗೊಳ್ಳುತ್ತದೆ  ಎಂದು ಹೇಳಿದ್ದಾರೆ.
ಇನ್ನು ಪರೇಶ್ ಮೇಸ್ತಾ ಸಾವಿನ ಬಳಿಕ ಪೊಲೀಸರು ಕೈಗೊಂಡಿದ್ದ ಕೆಲ ನಿರ್ಣಯಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದವು. ಪ್ರಮುಖವಾಗಿ ಪರೇಶ್ ಮೇಸ್ತಾ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಖಾಸಗಿ ಆಸ್ಪತ್ರೆ ಕಸ್ತೂರಬಾ  ವೈದ್ಯಕೀಯ ಕಾಲೇಜು, ಮಣಿಪಾಲದಲ್ಲಿ ನಡೆಸಿದ್ದು ಪ್ರಶ್ನಾರ್ಥಕವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT