ರಾಜ್ಯ

ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಸರಿಸಮನಾದ ವ್ಯಕ್ತಿ: ನಿರಂಜನಾನಂದ ಪುರಿ ಸ್ವಾಮೀಜಿ

Lingaraj Badiger
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಮಾನಾಗಿರುವ ವ್ಯಕ್ತಿ ಎಂದು ಕಾಗಿನೆಲೆ ಕನಕಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಶುಕ್ರವಾರ ಹೇಳಿದ್ದಾರೆ. 
ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಪ್ರಧಾನಿ ಮೋದಿ ಸರಿಸಮಾನವಾದ ವ್ಯಕ್ತಿ ಯಾರದರೂ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದರು. ಅಲ್ಲದೆ ನಮ್ಮ ಹಾಲುಮತ ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇರಬೇಕು ಆಗ ಸಿದ್ದರಾಮಯ್ಯ ಅವರು ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಇಂದು ಬೆಳ್ಳೂಡಿಯಲ್ಲಿ ಹಮ್ಮಿಕೊಂಡಿರುವ ಕನಕ ಗುರುಪೀಠದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಹ ಭಾಗವಹಿಸಿದ್ದಾರೆ.
SCROLL FOR NEXT