ಸಂಗ್ರಹ ಚಿತ್ರ 
ರಾಜ್ಯ

ಮಹದಾಯಿ ನ್ಯಾಯಾಧಿಕರಣದ ಅವಧಿ ವಿಸ್ತರಣೆ ಮಾಡುವ ಗೋವಾ ಪ್ರಸ್ತಾವಕ್ಕೆ ಕರ್ನಾಟಕ ವಿರೋಧ

ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರದ ದ್ವಂದ್ವ ನಿಲುವು ಮುಂದುವರೆದಿರುವಂತೆಯೇ, ಮಹದಾಯಿ ನ್ಯಾಯಾಧಿಕರಣದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ ಗೋವಾ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರದ ದ್ವಂದ್ವ ನಿಲುವು ಮುಂದುವರೆದಿರುವಂತೆಯೇ, ಮಹದಾಯಿ ನ್ಯಾಯಾಧಿಕರಣದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ ಗೋವಾ ಸರ್ಕಾರದ  ಪ್ರಸ್ತಾಪಕ್ಕೆ ಕರ್ನಾಟಕ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ವಿವಾದ ಕುಡಿಯುವ ನೀರಿಗೆ ಸಂಬಂಧಿಸಿದ್ದಾಗಿದ್ದು, ಪ್ರಕರಣದ ವಿಚಾರಣೆ ಆದ್ಯತೆಯ ಮೇರೆಗೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. "ಮಹದಾಯಿ ನದಿ ನೀರು  ಹಂಚಿಕೆ ಕುರಿತಂತೆ ಉದ್ಭವಿಸಿರುವ ವಿವಾದವನ್ನು ಬಗೆಹರಿಸಲು ರಚಿಸಲಾಗಿರುವ ನ್ಯಾಯಾಧಿಕರಣದ ಅವಧಿಯನ್ನು ಮತ್ತೆ ವಿಸ್ತರಿಸಬೇಕೆಂಬ ಗೋವಾ ರಾಜ್ಯದ ಪ್ರಸ್ತಾವವನ್ನು ಕರ್ನಾಟಕ ರಾಜ್ಯ ಸಾರಾಸಗಟಾಗಿ ತಿರಸ್ಕರಿಸಿದೆ.  ಗೋವಾ ರಾಜ್ಯವು ಸಲ್ಲಿಸಿದ ತಕರಾರು ಅರ್ಜಿಯ ಮೇರೆಗೆ ರಚಿಸಲಾಗಿದ್ದ ಮಹದಾಯಿ ನ್ಯಾಯಾಧಿಕರಣದಲ್ಲಿ ಫೆಬ್ರವರಿ 6 ರಂದು ವಿಚಾರ ಪ್ರಾರಂಭವಾಗಬೇಕಿತ್ತು. ಆದರೆ, ಅಂದು ನ್ಯಾಯಾಧಿಕರಣದ ಮುಂದೆ ಹಾಜರಾದ  ಗೋವಾದ ಪರ ವಕೀಲರು ನ್ಯಾಯಾಧಿಕರಣದ ಅವಧಿಯ ವಿಸ್ತರಣೆ ಕುರಿತು ಪ್ರಸ್ತಾಪಿಸಿದರು".
"ಗೋವಾದ ಪ್ರಸ್ತಾಪ ಕುರಿತು ಅಭಿಪ್ರಾಯ ನೀಡುವಂತೆ ನ್ಯಾಯಾಧಿಕರಣವು ಸೂಚಿಸಿದಾಗ, ಸರ್ಕಾರದ ಗಮನಕ್ಕೆ ತಂದ ನಂತರವೇ ಈ ನಿಟ್ಟಿನಲ್ಲಿ ಅಭಿಪ್ರಾಯ ನೀಡುವುದಾಗಿ ತಿಳಿಸಿ, ಈ ಬಗ್ಗೆ ನಮಗೆ ಮಾಹಿತಿ ನೀಡಿದರು.  ಮೊದಲನೆಯದಾಗಿ ನ್ಯಾಯಾಧಿಕರಣದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಅವಧಿ ವಿಸ್ತರಣೆ ಮಾಡಲೇಬೇಕಾದ ಪ್ರಸಂಗ ಉದ್ಭವಿಸಿದರೂ ಅಂತಾರಾಜ್ಯ ಜಲ ವಿವಾದ ಕಾಯಿದೆಗೆ  ತಿದ್ದುಪಡಿ ತರಬೇಕಾಗುತ್ತದೆ. ಅವಧಿ ವಿಸ್ತರಣೆ ಮಾಡಿದರೆ ಸಮಸ್ಯೆ ಬಗೆಹರಿಯುವುದು ಮತ್ತಷ್ಟು ವಿಳಂಬವಾಗುತ್ತದೆ. ಈ ವಿವಾದವು ಕುಡಿಯುವ ನೀರಿಗೆ ಸಂಬಂಧಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ಆಧ್ಯತೆಯ ಮೇರೆಗೆ  ನಡೆಯಬೇಕೆಂಬುದು ರಾಜ್ಯದ ಸ್ಪಷ್ಟ ನಿಲುವಾಗಿದೆ. ಸರ್ಕಾರದ ಈ ನಿಲುವನ್ನು ಗೋವಾದ ಪರ ವಕೀಲರಿಗೆ ಹಾಗೂ ಮಹದಾಯಿ ನ್ಯಾಯಾಧಿಕರಣಕ್ಕೆ ನಮ್ಮ ರಾಜ್ಯದ ಪರ ವಕೀಲರು ಖಡಾಖಂಡಿತವಾಗಿ ತಿಳಿಸಿದ್ದಾರೆ" ಎಂದು  ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT