ಸಾಂದರ್ಭಿಕ ಚಿತ್ರ 
ರಾಜ್ಯ

ಲೇಟಾಗಿ ಫೀಸ್ ಕಟ್ಟುವವರಿಗೆ ದಂಡ ಹಾಕುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

ತಡವಾಗಿ ಶುಲ್ಕ ಕಟ್ಟುವವಟರಿಗೆ ದಂಡ ಹಾಕುವ ಖಾಸಗಿ ಶಾಲೆಗಳಿಗೆ ಅಂಕುಶ ಹಾಕಲು ಸರ್ಕಾರ ಮುಂದಾಗಿದೆ...

ಬೆಂಗಳೂರು: ತಡವಾಗಿ ಶುಲ್ಕ ಕಟ್ಟುವವಟರಿಗೆ ದಂಡ ಹಾಕುವ ಖಾಸಗಿ ಶಾಲೆಗಳಿಗೆ ಅಂಕುಶ ಹಾಕಲು ಸರ್ಕಾರ ಮುಂದಾಗಿದೆ. 
ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಶನ್, ಕಟ್ಟಡ ನಿರ್ಮಾಣ ಹೆಸರಿನಲ್ಲಿ ಶುಲ್ಕ ಪಾವತಿ ವಿಳಂಬಕ್ಕೆ ದಂಡ ವಿಧಿಸುವುದನ್ನು ತಡೆಯಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಶುಕ್ರವಾರ ಹೇಳಿದ್ದಾರೆ. 
ಪ್ರಶ್ನೋತ್ತರ ವೇಳೆ ಕಾಂಗ್ರೆಸ್'ನ ಪಿ.ಆರ್. ರಮೇಶ್ ಅವರು ಪ್ರಶ್ನೆಯೊಂದನ್ನು ಸರ್ಕಾರಕ್ಕೆ ಕೇಳಿದ್ದರು. ರಾಜ್ಯದಲ್ಲಿರುವ ಕೆಲ ಶಾಲೆಗಳು ಶುಲ್ಕ ಪಾವತಿ ವಿಳಂಬ ಮಾಡಿದ್ದಕ್ಕೆ ದಂಡವನ್ನು ವಿಧಿಸುತ್ತಿವೆ. ಇದು ಪೋಷಕರ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತಿದೆ. ರಾಜ್ಯ ಸರ್ಕಾರ ದೆಹಲಿಯನ್ನು ಅನುಸರಿಸಬೇಕಿದೆ. ಅಲ್ಲಿನ ನ್ಯಾಯಾಲಯದ ಶುಲ್ಕ ಪಾವತಿಗೆ ವಿಳಂಬ ಮಾಡಿದರೆ ದಿನಕ್ಕೆ ರೂ.0.50ಪೈಸೆಯಷ್ಟು ದಂಡವನ್ನು ವಿಧಿಸಬೇಕೆಂದು ತಿಳಿಸಿದೆ ಎಂದು ಹೇಳಿದರು. 
ಇದಕ್ಕೆ ಉತ್ತರಿಸಿರುವ ಸಚಿವರು, ಖಾಸಗಿ ಶಾಲೆಗಳಿಗೆ ಕಡಿವಾಣ ಹಾಗಲೂ ಮುಂದಾದಾಗ ನ್ಯಾಯಾಲಯದಲ್ಲಿ ಪ್ರಕರಣ ಬಿದ್ದು ಹೋಗಿದೆ. ರಾಜ್ಯದಲ್ಲಿ ಒಂದು ವ್ಯಾಜ್ಯ ನ್ಯಾಯಾಲಯದ ಅಂಗಳದಲ್ಲಿದೆ. ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ ಹಾಗೂ ಗುಜರಾತ್ ಸರ್ಕಾರಗಳು ಪ್ರತ್ಯೇಕ ಮಸೂದೆಯನ್ನು ಪ್ರಸ್ತಾಪಿಸಿತ್ತು. ಆದರೆ, ಮಸೂದೆ ಕುರಿತು ಚರ್ಚೆಗಳು ನಡೆಯುತ್ತಿವೆ. 
ಶೀಘ್ರದಲ್ಲಿಯೇ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ. ಖಾಸಗಿ ಶಾಲೆಗಲಲ್ಲಿ ಅಧಿಕ ಶುಲ್ಕವನ್ನು ಪಡೆಯುತ್ತಿರುವ ದೂರುಗಳಿಗೆ ಸಂಬಂಧಿಸಿದಂತೆ ವಿಚಾರಣೆಯನ್ನು ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (ಡೇರಾ) ರಚಿಸಲಾಗಿದೆ. ಸದರಿ ಪ್ರಾಧಿಕಾರವು ವಿಚಾರಣೆ ನಡೆಸಿ ತಪ್ಪಿತಸ್ಥ ಶಾಲೆಗಳ ವಿರುದ್ಧ ಗರಿಷ್ಠ ರೂ.10 ಲಕ್ಷ ಗಳ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. 
ಶಾಲೆಗಳು ದಂಡ ವಸೂಲಿ ಮಾಡಿದ ಎರಡು ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದ್ದು ಒಂದು ಶಾಲೆಗೆ ನೋಟಿಸ್ ಕಳುಹಿಸಲಾಗಿದೆ. ಮತ್ತೊಂದು ಪ್ರಕರಣ ವಿಚಾರಣೆಯ ಹಂತದಲ್ಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!