ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರ (ಸಾಂದರ್ಭಿಕ ಚಿತ್ರ) 
ರಾಜ್ಯ

ಅನಿಲ ಭಾಗ್ಯ ಯೋಜನೆಯಿಂದ ಕೇಂದ್ರಸರ್ಕಾರದ ತಾರತಮ್ಯ ನೀತಿ ನಿವಾರಣೆ -ಯು. ಟಿ. ಖಾದರ್

ರಾಜ್ಯಸರ್ಕಾರದ ಅನಿಲ ಭಾಗ್ಯ ಯೋಜನೆಯಿಂದ ಕೇಂದ್ರಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆಯ ತಾರತಮ್ಯ ನೀತಿಯನ್ನು ನಿವಾರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು. ಟಿ. ಖಾದರ್ ಹೇಳಿದ್ದಾರೆ.

ಮೈಸೂರು:  ರಾಜ್ಯಸರ್ಕಾರದ  ಅನಿಲ ಭಾಗ್ಯ ಯೋಜನೆಯಿಂದ ಕೇಂದ್ರಸರ್ಕಾರದ ಪ್ರಧಾನಮಂತ್ರಿ  ಉಜ್ವಲ ಯೋಜನೆಯ ತಾರತಮ್ಯ ನೀತಿಯನ್ನು ನಿವಾರಿಸಲಾಗುವುದು ಎಂದು ಆಹಾರ  ಮತ್ತು ನಾಗರಿಕ ಸರಬರಾಜು ಸಚಿವ ಯು. ಟಿ. ಖಾದರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಒಂದು ಹಳ್ಳಿಯಲ್ಲಿನ ಅರ್ಹ 100 ಫಲಾನುಭವಿಗಳಿಗೆ ಮಾತ್ರ ಅನಿಲ ಸಿಲಿಂಡರ್ ನೀಡಲಾಗುತ್ತಿದ್ದು,  ಸಾಕಷ್ಟು ಗೊಂದಲ ಹಾಗೂ ಗ್ರಾಮಸ್ಥರಲ್ಲೇ ಒಡಕಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಈ ತಾರತಮ್ಯ ನೀತಿಯನ್ನು ನಿವಾರಿಸಲು ರಾಜ್ಯಸರ್ಕಾರದಿಂದ   ಅರ್ಹ 1 ಲಕ್ಷ ಕುಟುಂಬಗಳಿಗೆ ಉಚಿತ ಸ್ಟೌವ್. ಲೈಟರ್ , ಸಿಲಿಂಡರ್ ಮತ್ತು ಎರಡು ಉಚಿತ ಪುನರ್ಭತಿ ಸಿಲಿಂಡರ್ ಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

 ಕೇಂದ್ರಸರ್ಕಾರ ಕೂಡಾ ಇದನ್ನು  ಅಳವಡಿಸಿಕೊಳ್ಳುವಂತೆ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಹೇಳಲಾಗಿದ್ದು, ಅವರು ಸಮ್ಮತಿ ನೀಡಿದ್ದಾರೆ, ಆದಾಗ್ಯೂ, ಕರ್ನಾಟಕ ಸರ್ಕಾರ ಯಾವುದೇ ಪೆಟ್ರೋಲಿಯಂ ಕಂಪನಿಗಳ ಪರವಾಗಿ ಹಣ ಪಾವತಿಸಿಲ್ಲ ಎಂದು ಸ್ಪಷ್ಪಪಡಿಸಿದರು.

ಅಂಗಡಿಗಳು ತಮಗಿಷ್ಟಬಂದ ದರದಲ್ಲಿ ಸಿಲಿಂಡರ್ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲಾಗಿದೆ, ಗ್ರಾಮ ಪಂಚಾಯಿತಿ ಸದಸ್ಯರನ್ನೊಳಗೊಂಡ ಜಾಗೃತಿ ಸಮಿತಿ ರಚಿಸಲಾಗುತ್ತಿದೆ. ಸಿಲಿಂಡರ್ ಬಂದಾಗ ಇವರು ಸಹಿ ಹಾಕಲಿದ್ದಾರೆ ಎಂದು ಯು. ಟಿ. ಖಾದರ್ ಹೇಳಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT