ಸಾಂದರ್ಭಿಕ ಚಿತ್ರ 
ರಾಜ್ಯ

ಗ್ಯಾಸ್ ಟ್ಯಾಂಕರ್ ಹರಿದು ತುಮಕೂರು ರಸ್ತೆ ಫ್ಲೈಓವರ್ ನಲ್ಲಿ ಬೈಕ್ ಸವಾರ ಸಾವು, ಇಬ್ಬರಿಗೆ ಗಾಯ

ವೇಗವಾಗಿ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 28 ವರ್ಷದ ಗಾರ್ಮೆಂಟ್ಸ್ ....

ಬೆಂಗಳೂರು: ವೇಗವಾಗಿ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 28 ವರ್ಷದ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರ ಮೃತಪಟ್ಟು, ಆತನ ಇಬ್ಬರು ಸ್ನೇಹಿತರು ಗಾಯಗೊಂಡಿರುವ ಘಟನೆ ಪೀಣ್ಯ ಸಮೀಪ ತುಮಕೂರು ಮೇಲ್ಸೇತುವೆಯಲ್ಲಿ ಮೊನ್ನೆ ಶುಕ್ರವಾರ ರಾತ್ರಿ ನಡೆದಿದೆ. ಬೈಕಿನಲ್ಲಿ ಮೂವರು ಇದ್ದು ಯಾರು ಕೂಡ ಹೆಲ್ಮೆಟ್ ಧರಿಸಿರಲಿಲ್ಲ.
ಮೃತ ಯುವಕನನ್ನು ನೆಲಮಂಗಲ ಸಮೀಪ ಅರಸಿನಕುಂಟೆಯ ನಿವಾಸಿ ವೀರೇಶ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಗೊರಗುಂಟೆಪಾಳ್ಯದ ಎನ್.ಗೌಡ ಮತ್ತು ವೀರಣ್ಣ ಆಗಿದ್ದಾರೆ. ಮೂವರು ಕೂಡ ಪೀಣ್ಯದ ಗಾರ್ಮೆಂಟ್ಸ್ ಫ್ಯಾಕ್ಟರಿಯ ನೌಕರರು.
ಮೊನ್ನೆ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಗೌಡ ವೀರೇಶ್ ಮತ್ತು ವೀರಣ್ಣ ಅವರನ್ನು ಕರೆದುಕೊಂಡು ವೀರೇಶ್ ಮನೆಗೆ ಹೋಗುತ್ತಿದ್ದರು. ತುಮಕೂರು ರಸ್ತೆಯ ಫ್ಲೈ ಓವರ್ ನಲ್ಲಿ ಹೋಗುತ್ತಿರುವಾಗ ವೇಗವಾಗಿ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಅವರ ಮೇಲೆ ಹರಿಯಿತು.
ಡಿಕ್ಕಿ ಹೊಡೆದಿದ್ದು ಎಷ್ಟು ರಭಸವಾಗಿತ್ತೆಂದರೆ ಬೈಕ್ 100 ಮೀಟರ್ ಮುಂದೆ ಹೋಗಿ ಬಿದ್ದಿತು. ಟ್ಯಾಂಕರ್ ನ ಚಕ್ರದಡಿಗೆ ಸಿಲುಕಿದ ವೀರೇಶ್ ಸ್ಥಳದಲ್ಲಿಯೇ ಮೃತಪಟ್ಟರು. ಗೌಡ ಮತ್ತು ವೀರಣ್ಣ ಮೇಲ್ಸೇತುವೆಯ ಗೋಡೆಗೆ ಬಿದ್ದರು. ಸ್ಥಳೀಯರು ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು.
ಈ ಘಟನೆ ನಂತರ ಕೆಲ ಹೊತ್ತು ಫ್ಲೈ ಓವರ್ ನಲ್ಲಿ ಸಂಚಾರದಟ್ಟಣೆಯುಂಟಾಯಿತು. ಪೀಣ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 
ಅಜಾಗರೂಕತೆ ಚಾಲನೆ ಕಾರಣದಲ್ಲಿ ಟ್ಯಾಂಕರ್ ಚಾಲಕ ಗಣೇಶ್ ನನ್ನು ಪೊಲೀಸರು ಬಂಧಿಸಿದರು. ಬೈಕ್ ಚಾಲಕರು ಮದ್ಯಪಾನ ಮಾಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT