ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆ ಭೇಟಿಯಾಡುತ್ತಿದ್ದ ಆರೋಪಿಗಳ ಚಿತ್ರ 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಮಂದಿ ಜಿಂಕೆ ಹಂತಕರ ಬಂಧನ

ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಬೆಂಗಳೂರು: ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ರಾಜು (38) ಬೆಟ್ಟಗೌಡನದೊಡ್ಡಿ, ಚೆಲುವರಾಜ್ (30) ಕನಕಪುರ,  ಮಾದೇಗೌಡ (63) ಜಗದೀಶ್,  ರಮೇಶ್, ಮತ್ತು ಗಿರೀಶ್  ಬಂಧಿತ ಆರೋಪಿಗಳು. ಇವರೆಲ್ಲರೂ  ಮಳವಳ್ಳಿ ತಾಲೂಕು ಬ್ಯಾಡರಹಳ್ಳಿಯ ನಿವಾಸಿಗಳಾಗಿದ್ದಾರೆ. ಬಂಧಿತರಿಂದ ಮೂರು ಬಂದೂಕು, ಎರಡು ವಾಹನ, ಬ್ಯಾಟರಿಯನ್ನು ವಶಪಡಿಸಿಕೊಳ್ಳಲಾಗಿದೆ.

 ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ಸಶಸ್ತ್ರ ಕಾಯ್ದೆ ಅನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಭೇಟಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂಧಿತರಿಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆಗೊಳಪಡಿಸಬೇಕೆಂದು ವನ್ಯಜೀವಿ ಹೋರಾಟಗಾರರ ಶಂಕರ್ ಒತ್ತಾಯಿಸಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಆನೆ, ಜಿಂಕೆಯಂತಹ ವನ್ಯಜೀವಿಗಳ ಭೇಟಿ ಕಳೆದೊಂದು ದಶಕದಿಂದಲೂ ನಿರಂತರವಾಗಿ ನಡೆಯುತ್ತಲೇ ಬಂದಿದ್ದು, ಭೇಟಿಯಾಡಿದ್ದ ನಂತರ ಕಳ್ಳ ಮಾಂಸ ಬೇಟೆಗಾರರು ನೆರೆಯ ತಮಿಳುನಾಡಿನಿಂದ ಪರಾರಿಯಾಗುತ್ತಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT