ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆ ಭೇಟಿಯಾಡುತ್ತಿದ್ದ ಆರೋಪಿಗಳ ಚಿತ್ರ 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಮಂದಿ ಜಿಂಕೆ ಹಂತಕರ ಬಂಧನ

ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಬೆಂಗಳೂರು: ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ರಾಜು (38) ಬೆಟ್ಟಗೌಡನದೊಡ್ಡಿ, ಚೆಲುವರಾಜ್ (30) ಕನಕಪುರ,  ಮಾದೇಗೌಡ (63) ಜಗದೀಶ್,  ರಮೇಶ್, ಮತ್ತು ಗಿರೀಶ್  ಬಂಧಿತ ಆರೋಪಿಗಳು. ಇವರೆಲ್ಲರೂ  ಮಳವಳ್ಳಿ ತಾಲೂಕು ಬ್ಯಾಡರಹಳ್ಳಿಯ ನಿವಾಸಿಗಳಾಗಿದ್ದಾರೆ. ಬಂಧಿತರಿಂದ ಮೂರು ಬಂದೂಕು, ಎರಡು ವಾಹನ, ಬ್ಯಾಟರಿಯನ್ನು ವಶಪಡಿಸಿಕೊಳ್ಳಲಾಗಿದೆ.

 ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ಸಶಸ್ತ್ರ ಕಾಯ್ದೆ ಅನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಭೇಟಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂಧಿತರಿಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆಗೊಳಪಡಿಸಬೇಕೆಂದು ವನ್ಯಜೀವಿ ಹೋರಾಟಗಾರರ ಶಂಕರ್ ಒತ್ತಾಯಿಸಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಆನೆ, ಜಿಂಕೆಯಂತಹ ವನ್ಯಜೀವಿಗಳ ಭೇಟಿ ಕಳೆದೊಂದು ದಶಕದಿಂದಲೂ ನಿರಂತರವಾಗಿ ನಡೆಯುತ್ತಲೇ ಬಂದಿದ್ದು, ಭೇಟಿಯಾಡಿದ್ದ ನಂತರ ಕಳ್ಳ ಮಾಂಸ ಬೇಟೆಗಾರರು ನೆರೆಯ ತಮಿಳುನಾಡಿನಿಂದ ಪರಾರಿಯಾಗುತ್ತಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT