ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆ ಭೇಟಿಯಾಡುತ್ತಿದ್ದ ಆರೋಪಿಗಳ ಚಿತ್ರ 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಮಂದಿ ಜಿಂಕೆ ಹಂತಕರ ಬಂಧನ

ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಬೆಂಗಳೂರು: ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ರಾಜು (38) ಬೆಟ್ಟಗೌಡನದೊಡ್ಡಿ, ಚೆಲುವರಾಜ್ (30) ಕನಕಪುರ,  ಮಾದೇಗೌಡ (63) ಜಗದೀಶ್,  ರಮೇಶ್, ಮತ್ತು ಗಿರೀಶ್  ಬಂಧಿತ ಆರೋಪಿಗಳು. ಇವರೆಲ್ಲರೂ  ಮಳವಳ್ಳಿ ತಾಲೂಕು ಬ್ಯಾಡರಹಳ್ಳಿಯ ನಿವಾಸಿಗಳಾಗಿದ್ದಾರೆ. ಬಂಧಿತರಿಂದ ಮೂರು ಬಂದೂಕು, ಎರಡು ವಾಹನ, ಬ್ಯಾಟರಿಯನ್ನು ವಶಪಡಿಸಿಕೊಳ್ಳಲಾಗಿದೆ.

 ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ಸಶಸ್ತ್ರ ಕಾಯ್ದೆ ಅನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಭೇಟಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂಧಿತರಿಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆಗೊಳಪಡಿಸಬೇಕೆಂದು ವನ್ಯಜೀವಿ ಹೋರಾಟಗಾರರ ಶಂಕರ್ ಒತ್ತಾಯಿಸಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಆನೆ, ಜಿಂಕೆಯಂತಹ ವನ್ಯಜೀವಿಗಳ ಭೇಟಿ ಕಳೆದೊಂದು ದಶಕದಿಂದಲೂ ನಿರಂತರವಾಗಿ ನಡೆಯುತ್ತಲೇ ಬಂದಿದ್ದು, ಭೇಟಿಯಾಡಿದ್ದ ನಂತರ ಕಳ್ಳ ಮಾಂಸ ಬೇಟೆಗಾರರು ನೆರೆಯ ತಮಿಳುನಾಡಿನಿಂದ ಪರಾರಿಯಾಗುತ್ತಿದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ