ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆ ಭೇಟಿಯಾಡುತ್ತಿದ್ದ ಆರೋಪಿಗಳ ಚಿತ್ರ 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಮಂದಿ ಜಿಂಕೆ ಹಂತಕರ ಬಂಧನ

ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಬೆಂಗಳೂರು: ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ರಾಜು (38) ಬೆಟ್ಟಗೌಡನದೊಡ್ಡಿ, ಚೆಲುವರಾಜ್ (30) ಕನಕಪುರ,  ಮಾದೇಗೌಡ (63) ಜಗದೀಶ್,  ರಮೇಶ್, ಮತ್ತು ಗಿರೀಶ್  ಬಂಧಿತ ಆರೋಪಿಗಳು. ಇವರೆಲ್ಲರೂ  ಮಳವಳ್ಳಿ ತಾಲೂಕು ಬ್ಯಾಡರಹಳ್ಳಿಯ ನಿವಾಸಿಗಳಾಗಿದ್ದಾರೆ. ಬಂಧಿತರಿಂದ ಮೂರು ಬಂದೂಕು, ಎರಡು ವಾಹನ, ಬ್ಯಾಟರಿಯನ್ನು ವಶಪಡಿಸಿಕೊಳ್ಳಲಾಗಿದೆ.

 ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ಸಶಸ್ತ್ರ ಕಾಯ್ದೆ ಅನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಭೇಟಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂಧಿತರಿಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆಗೊಳಪಡಿಸಬೇಕೆಂದು ವನ್ಯಜೀವಿ ಹೋರಾಟಗಾರರ ಶಂಕರ್ ಒತ್ತಾಯಿಸಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಆನೆ, ಜಿಂಕೆಯಂತಹ ವನ್ಯಜೀವಿಗಳ ಭೇಟಿ ಕಳೆದೊಂದು ದಶಕದಿಂದಲೂ ನಿರಂತರವಾಗಿ ನಡೆಯುತ್ತಲೇ ಬಂದಿದ್ದು, ಭೇಟಿಯಾಡಿದ್ದ ನಂತರ ಕಳ್ಳ ಮಾಂಸ ಬೇಟೆಗಾರರು ನೆರೆಯ ತಮಿಳುನಾಡಿನಿಂದ ಪರಾರಿಯಾಗುತ್ತಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT