ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆ ಭೇಟಿಯಾಡುತ್ತಿದ್ದ ಆರೋಪಿಗಳ ಚಿತ್ರ 
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಮಂದಿ ಜಿಂಕೆ ಹಂತಕರ ಬಂಧನ

ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಬೆಂಗಳೂರು: ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಮಾಂಸಕ್ಕಾಗಿ ಜಿಂಕೆಯಂತಹ ಪ್ರಾಣಿಗಳನ್ನು ಭೇಟಿಯಾಡಿ ಕೊಲುತ್ತಿದ್ದ ಆರು ಮಂದಿ ಹಂತಕರನ್ನು ಹಲಗೂರು ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ರಾಜು (38) ಬೆಟ್ಟಗೌಡನದೊಡ್ಡಿ, ಚೆಲುವರಾಜ್ (30) ಕನಕಪುರ,  ಮಾದೇಗೌಡ (63) ಜಗದೀಶ್,  ರಮೇಶ್, ಮತ್ತು ಗಿರೀಶ್  ಬಂಧಿತ ಆರೋಪಿಗಳು. ಇವರೆಲ್ಲರೂ  ಮಳವಳ್ಳಿ ತಾಲೂಕು ಬ್ಯಾಡರಹಳ್ಳಿಯ ನಿವಾಸಿಗಳಾಗಿದ್ದಾರೆ. ಬಂಧಿತರಿಂದ ಮೂರು ಬಂದೂಕು, ಎರಡು ವಾಹನ, ಬ್ಯಾಟರಿಯನ್ನು ವಶಪಡಿಸಿಕೊಳ್ಳಲಾಗಿದೆ.

 ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ಸಶಸ್ತ್ರ ಕಾಯ್ದೆ ಅನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಭೇಟಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಂಧಿತರಿಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆಗೊಳಪಡಿಸಬೇಕೆಂದು ವನ್ಯಜೀವಿ ಹೋರಾಟಗಾರರ ಶಂಕರ್ ಒತ್ತಾಯಿಸಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಆನೆ, ಜಿಂಕೆಯಂತಹ ವನ್ಯಜೀವಿಗಳ ಭೇಟಿ ಕಳೆದೊಂದು ದಶಕದಿಂದಲೂ ನಿರಂತರವಾಗಿ ನಡೆಯುತ್ತಲೇ ಬಂದಿದ್ದು, ಭೇಟಿಯಾಡಿದ್ದ ನಂತರ ಕಳ್ಳ ಮಾಂಸ ಬೇಟೆಗಾರರು ನೆರೆಯ ತಮಿಳುನಾಡಿನಿಂದ ಪರಾರಿಯಾಗುತ್ತಿದ್ದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT