ಬೆಂಗಳೂರು: ಮೈಮೇಲೆ ತುರಿಕೆ ಪುಡಿ ಎರಚಿ 45,000 ನಗದು ದರೋಡೆ 
ರಾಜ್ಯ

ಬೆಂಗಳೂರು: ಮೈಮೇಲೆ ತುರಿಕೆ ಪುಡಿ ಎರಚಿ 45,000 ನಗದು ದರೋಡೆ

ತುರಿಕೆ ಪುಡಿ ಮೈಮೇಲೆ ಎರಚಿ ವ್ಯಕ್ತಿಯೊಬ್ಬರಿಂದ 45,000 ರೂ ದೋಚಿದ ಘಟನೆ ಬೆಂಗಳೂರು ಕೆಆರ್ ಮಾರ್ಕೆಟ್ ಬಳಿ ನಡೆದಿದೆ.

ಬೆಂಗಳೂರು: ತುರಿಕೆ ಪುಡಿ ಮೈಮೇಲೆ ಎರಚಿ ವ್ಯಕ್ತಿಯೊಬ್ಬರಿಂದ 45,000 ರೂ ದೋಚಿದ ಘಟನೆ ಬೆಂಗಳೂರು ಕೆಆರ್ ಮಾರ್ಕೆಟ್ ಬಳಿ ನಡೆದಿದೆ. ಶನಿವಾರ ನಡೆದ ಘಟನೆ ಸಂಬಂಧ ಜೆಪಿ ನಗರ ನಿವಾಸಿ ವಿನೀತ್ ಪವನ್ ಜೈನ್ ಎನ್ನುವವರು ಸೋಮವಾರದಂದು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿನೀತ್ ಅವರು ಚಿಕ್ಕಪೇಟೆಯಲ್ಲಿ ಹಾರ್ಡ್ ವೇರ್ ಶಾಪ್ ನಡೆಸುತ್ತಿದ್ದಾರೆ.
ಶನಿವಾರ ರಾತ್ರಿ 8.30ರ ಸುಮಾರಿಗೆ ಅಂಗಡಿ ಬಾಗಿಲು ಹಾಕಿ ತಮ್ಮ ಸ್ಕೂಟರ್ ನಲ್ಲಿ ಮನೆ ಕಡೆ ಹೊರಟಿದ್ದ ಜೈನ್ ಕಲಾಸಿಪಾಳ್ಯ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಇವರ ತೋಳಿನ ಭಾಗಕ್ಕೆ ತುರಿಕೆ ಪುಡಿಯನ್ನು ಎರಚಿದ್ದಾನೆ. ತುರಿಕೆ ಪ್ರಾರಂಭವಾಗಿದ್ದ ಕಾರಣ ತಮ್ಮ ವಾಹನ ನಿಲ್ಲಿಸಿದ್ದ ವಿನೀತ್ ಪುಡಿ ಎರಚಿದ್ದ ಜಾಗವನ್ನು ನೀರಿನಿಂದ ತೊಳೆದುಕೊಳ್ಳಲಿಕ್ಕಾಗಿ ಹತ್ತಿರದ ಆಟೋ ರಿಕ್ಷಾ ಚಾಲಕರ ಬಳಿ ನೀರು ತರಲೆಂದು ಹೋಗಿದ್ದಾರೆ. ಇದೇ ವೇಳೆ ಇನ್ನೋರ್ವ ದುಷ್ಕರ್ಮಿಯು ಸ್ಕೂಟರ್ ನ ಬೂಟ್ ಬಾಕ್ಸ್ ನಲ್ಲಿದ್ದ ನಗದು, ಪೆನ್ ಡ್ರೈವ್ ಹಾಗೂ ಅಂಗಡಿಯ ಕೀಲಿ ಕೈಯೊಡನೆ ಪರಾರಿಯಾಗಿದ್ದಾನೆ ಎಂದು ಪೋಲೀಸ್ ಅಧಿಕಾರಿಯೊಬ್ಬರು ಹೇಳಿಅದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT