ಅನೀಶ್ 
ರಾಜ್ಯ

ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿ 3 ವರ್ಷದ ಮಗು ಸಾವು

ಗಂಟಲಲ್ಲಿ ಅವಲಕ್ಕಿ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ....

ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ (3) ಮೃತಪಟ್ಟ ಬಾಲಕ.
ನಿನ್ನೆ ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ಮಾಡಿದ್ದರು. ಆದರೆ ಮಾರ್ಗದಲ್ಲೇ ಮಗು ಮೃತಪಟ್ಟಿದೆ.
ಇತ್ತೀಚಿಗಷ್ಟೆ ರಾಮನಗರದಲ್ಲಿ ಸೆರಿಲಾಕ್ ಸೇವಿಸಿದ್ದ ಮೂರು ತಿಂಗಳ ಹೆಣ್ಣು ಮಗು ಮೃತಪಟ್ಟಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಸೇಬು ಸೇವಿಸುವ ವೇಳೆ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ 11 ವರ್ಷದ ಬಾಲಕ ಆಸೀಫ್ ಅಸುನೀಗಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT