ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ (3) ಮೃತಪಟ್ಟ ಬಾಲಕ.
ನಿನ್ನೆ ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ಮಾಡಿದ್ದರು. ಆದರೆ ಮಾರ್ಗದಲ್ಲೇ ಮಗು ಮೃತಪಟ್ಟಿದೆ.
ಇತ್ತೀಚಿಗಷ್ಟೆ ರಾಮನಗರದಲ್ಲಿ ಸೆರಿಲಾಕ್ ಸೇವಿಸಿದ್ದ ಮೂರು ತಿಂಗಳ ಹೆಣ್ಣು ಮಗು ಮೃತಪಟ್ಟಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಸೇಬು ಸೇವಿಸುವ ವೇಳೆ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದರಿಂದ 11 ವರ್ಷದ ಬಾಲಕ ಆಸೀಫ್ ಅಸುನೀಗಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos