ಬಿಜೆಪಿ ಕಾರ್ಪೊರೇಟರ್ ರೇಖಾ ಮತ್ತು ಅವರ ಪತಿ ಕದಿರೇಶ್ (ಸಂಗ್ರಹ ಚಿತ್ರ) 
ರಾಜ್ಯ

ಪಾಲಿಕೆ ಸದಸ್ಯೆ ರೇಖಾ ಪತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್‌. ಕದಿರೇಶ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್‌ ಹಾಗೂ ಆತನ ...

ಬೆಂಗಳೂರು:  ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್‌. ಕದಿರೇಶ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್‌ ಹಾಗೂ ಆತನ ತಮ್ಮ ವಿನಯ್‌ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಆಂಜನಪ್ಪ ಗಾರ್ಡನ್‌ ಮುನೀಶ್ವರ ದೇವಸ್ಥಾನದ ಆವರಣದಲ್ಲೇ ಫೆ. 7ರಂದು ಕದಿರೇಶ್‌ ಕೊಲೆ ನಡೆದಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರು, ತಿರುಪತಿಗೆ ಹೋಗಿ ತಲೆ ಬೋಳಿಸಿಕೊಂಡಿದ್ದರು. ಅಲ್ಲಿಂದಲೇ ನಗರಕ್ಕೆ ಬಂದಿದ್ದ ಅವರು ವಕೀಲರ ಜತೆಗೆ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರಾದರು.
ಪೊಲೀಸರು ಗುಂಡು ಹಾರಿಸಿ ತಮ್ಮನ್ನು ಬಂಧಿಸಬಹುದು ಭಾವಿಸಿದ್ದ ಆರೋಪಿಗಳ,  ವಕೀಲರ ರೀತಿಯಲ್ಲೇ ಸೂಟ್‌ ಧರಿಸಿ ನ್ಯಾಯಾಲಯ ಪ್ರವೇಶಿಸಿದ್ದರು. ನಂತರ ನ್ಯಾಯಾಧೀಶರ ಮುಂದೆ ಶರಣಾದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಅವರು ಎಂಬುದು ಆರಂಭದಲ್ಲಿ ಯಾರಿಗೂ ಗೊತ್ತಿರಲಿಲ್ಲ. ಅವರ ಪರ ವಕೀಲರು ನ್ಯಾಯಾಲಯದೊಳಗೆ ಹೋದ ನಂತರವೇ ಕೈ ಮುಗಿದುಕೊಂಡು ಆರೋಪಿಗಳು ಒಳಗೆ ಬಂದರು. ಪೊಲೀಸರ ಭಯವಿರುವುದರಿಂದ ಈ ವೇಷದಲ್ಲಿ ಬಂದಿರುವುದಾಗಿ ಅವರು ನ್ಯಾಯಾಲಯಕ್ಕೆ ಹೇಳಿದರು’ 
ಆರೋಪಿಗಳ ವಿರುದ್ಧ ಗಂಭೀರ ಆರೋಪ ಇದೆ. ಕೊಲೆ ನಡೆದ ದಿನದಿಂದಲೇ ಆರೋಪಿಗಳಿಗಾಗಿ ನಾಲ್ಕು ತಂಡಗಳು ನಿರಂತರವಾಗಿ ಶೋಧ ನಡೆಸುತ್ತಿತ್ತು. ವಿಚಾರಣೆಗಾಗಿ ಅವರಿಬ್ಬರನ್ನು 15 ದಿನ ಕಸ್ಟಡಿಗೆ ನೀಡಬೇಕು’ ಎಂದು ಪೊಲೀಸರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಗಳನ್ನು 10 ದಿನಗಳವರೆಗೆ ಪೊಲೀಸರ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT