ಬಿಜೆಪಿ ಕಾರ್ಪೊರೇಟರ್ ರೇಖಾ ಮತ್ತು ಅವರ ಪತಿ ಕದಿರೇಶ್ (ಸಂಗ್ರಹ ಚಿತ್ರ) 
ರಾಜ್ಯ

ಪಾಲಿಕೆ ಸದಸ್ಯೆ ರೇಖಾ ಪತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್‌. ಕದಿರೇಶ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್‌ ಹಾಗೂ ಆತನ ...

ಬೆಂಗಳೂರು:  ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್‌. ಕದಿರೇಶ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್‌ ಹಾಗೂ ಆತನ ತಮ್ಮ ವಿನಯ್‌ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಆಂಜನಪ್ಪ ಗಾರ್ಡನ್‌ ಮುನೀಶ್ವರ ದೇವಸ್ಥಾನದ ಆವರಣದಲ್ಲೇ ಫೆ. 7ರಂದು ಕದಿರೇಶ್‌ ಕೊಲೆ ನಡೆದಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರು, ತಿರುಪತಿಗೆ ಹೋಗಿ ತಲೆ ಬೋಳಿಸಿಕೊಂಡಿದ್ದರು. ಅಲ್ಲಿಂದಲೇ ನಗರಕ್ಕೆ ಬಂದಿದ್ದ ಅವರು ವಕೀಲರ ಜತೆಗೆ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರಾದರು.
ಪೊಲೀಸರು ಗುಂಡು ಹಾರಿಸಿ ತಮ್ಮನ್ನು ಬಂಧಿಸಬಹುದು ಭಾವಿಸಿದ್ದ ಆರೋಪಿಗಳ,  ವಕೀಲರ ರೀತಿಯಲ್ಲೇ ಸೂಟ್‌ ಧರಿಸಿ ನ್ಯಾಯಾಲಯ ಪ್ರವೇಶಿಸಿದ್ದರು. ನಂತರ ನ್ಯಾಯಾಧೀಶರ ಮುಂದೆ ಶರಣಾದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಅವರು ಎಂಬುದು ಆರಂಭದಲ್ಲಿ ಯಾರಿಗೂ ಗೊತ್ತಿರಲಿಲ್ಲ. ಅವರ ಪರ ವಕೀಲರು ನ್ಯಾಯಾಲಯದೊಳಗೆ ಹೋದ ನಂತರವೇ ಕೈ ಮುಗಿದುಕೊಂಡು ಆರೋಪಿಗಳು ಒಳಗೆ ಬಂದರು. ಪೊಲೀಸರ ಭಯವಿರುವುದರಿಂದ ಈ ವೇಷದಲ್ಲಿ ಬಂದಿರುವುದಾಗಿ ಅವರು ನ್ಯಾಯಾಲಯಕ್ಕೆ ಹೇಳಿದರು’ 
ಆರೋಪಿಗಳ ವಿರುದ್ಧ ಗಂಭೀರ ಆರೋಪ ಇದೆ. ಕೊಲೆ ನಡೆದ ದಿನದಿಂದಲೇ ಆರೋಪಿಗಳಿಗಾಗಿ ನಾಲ್ಕು ತಂಡಗಳು ನಿರಂತರವಾಗಿ ಶೋಧ ನಡೆಸುತ್ತಿತ್ತು. ವಿಚಾರಣೆಗಾಗಿ ಅವರಿಬ್ಬರನ್ನು 15 ದಿನ ಕಸ್ಟಡಿಗೆ ನೀಡಬೇಕು’ ಎಂದು ಪೊಲೀಸರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಗಳನ್ನು 10 ದಿನಗಳವರೆಗೆ ಪೊಲೀಸರ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT