ಬಿಜೆಪಿ ಕಾರ್ಪೊರೇಟರ್ ರೇಖಾ ಮತ್ತು ಅವರ ಪತಿ ಕದಿರೇಶ್ (ಸಂಗ್ರಹ ಚಿತ್ರ) 
ರಾಜ್ಯ

ಪಾಲಿಕೆ ಸದಸ್ಯೆ ರೇಖಾ ಪತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್‌. ಕದಿರೇಶ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್‌ ಹಾಗೂ ಆತನ ...

ಬೆಂಗಳೂರು:  ಛಲವಾದಿಪಾಳ್ಯ ವಾರ್ಡ್‌ನ ಬಿಜೆಪಿ ಪಾಲಿಕೆ ಸದಸ್ಯೆ ರೇಖಾ ಅವರ ಪತಿ ಎಸ್‌. ಕದಿರೇಶ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನವೀನ್‌ ಹಾಗೂ ಆತನ ತಮ್ಮ ವಿನಯ್‌ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಆಂಜನಪ್ಪ ಗಾರ್ಡನ್‌ ಮುನೀಶ್ವರ ದೇವಸ್ಥಾನದ ಆವರಣದಲ್ಲೇ ಫೆ. 7ರಂದು ಕದಿರೇಶ್‌ ಕೊಲೆ ನಡೆದಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರು, ತಿರುಪತಿಗೆ ಹೋಗಿ ತಲೆ ಬೋಳಿಸಿಕೊಂಡಿದ್ದರು. ಅಲ್ಲಿಂದಲೇ ನಗರಕ್ಕೆ ಬಂದಿದ್ದ ಅವರು ವಕೀಲರ ಜತೆಗೆ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರಾದರು.
ಪೊಲೀಸರು ಗುಂಡು ಹಾರಿಸಿ ತಮ್ಮನ್ನು ಬಂಧಿಸಬಹುದು ಭಾವಿಸಿದ್ದ ಆರೋಪಿಗಳ,  ವಕೀಲರ ರೀತಿಯಲ್ಲೇ ಸೂಟ್‌ ಧರಿಸಿ ನ್ಯಾಯಾಲಯ ಪ್ರವೇಶಿಸಿದ್ದರು. ನಂತರ ನ್ಯಾಯಾಧೀಶರ ಮುಂದೆ ಶರಣಾದರು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಅವರು ಎಂಬುದು ಆರಂಭದಲ್ಲಿ ಯಾರಿಗೂ ಗೊತ್ತಿರಲಿಲ್ಲ. ಅವರ ಪರ ವಕೀಲರು ನ್ಯಾಯಾಲಯದೊಳಗೆ ಹೋದ ನಂತರವೇ ಕೈ ಮುಗಿದುಕೊಂಡು ಆರೋಪಿಗಳು ಒಳಗೆ ಬಂದರು. ಪೊಲೀಸರ ಭಯವಿರುವುದರಿಂದ ಈ ವೇಷದಲ್ಲಿ ಬಂದಿರುವುದಾಗಿ ಅವರು ನ್ಯಾಯಾಲಯಕ್ಕೆ ಹೇಳಿದರು’ 
ಆರೋಪಿಗಳ ವಿರುದ್ಧ ಗಂಭೀರ ಆರೋಪ ಇದೆ. ಕೊಲೆ ನಡೆದ ದಿನದಿಂದಲೇ ಆರೋಪಿಗಳಿಗಾಗಿ ನಾಲ್ಕು ತಂಡಗಳು ನಿರಂತರವಾಗಿ ಶೋಧ ನಡೆಸುತ್ತಿತ್ತು. ವಿಚಾರಣೆಗಾಗಿ ಅವರಿಬ್ಬರನ್ನು 15 ದಿನ ಕಸ್ಟಡಿಗೆ ನೀಡಬೇಕು’ ಎಂದು ಪೊಲೀಸರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಗಳನ್ನು 10 ದಿನಗಳವರೆಗೆ ಪೊಲೀಸರ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!