ರಾಜ್ಯ

ಬೆಂಗಳೂರು: ಮೆಡಿಕಲ್, ಇಂಜಿನಿಯರಿಂಗ್ ಪಿಜಿ ಸೀಟು ದಂಧೆ; ಇಬ್ಬರ ಬಂಧನ

ಪ್ರತಿಷ್ಠಿತ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ಪ್ರತಿಷ್ಠಿತ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಪಿಜಿ ಸೀಟು ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರುಪಾಯಿ ವಂಚನೆ ಮಾಡಿದ್ದ ಇಬ್ಬರನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ಆರೋಪಿಗಳನ್ನು ರಜತ್ ಶೆಟ್ಟಿ ಹಾಗೂ ಜಯಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅವರಿಂದ 32 ಲಕ್ಷ ರುಪಾಯಿ ನಗದು ಮತ್ತು 50 ಲಕ್ಷ ರುಪಾಯಿ ಫಿಕ್ಸೆಡ್ ಡಿಪಾಸಿಟ್ ದಾಖಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ಬಂಧಿತರಿಂದ 1.03 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ. 
ರಜತ್ ಶೆಟ್ಟಿ ಮತ್ತು ಜಯಪ್ರಕಾಶ್ ಶೆಟ್ಟಿ ಅವರು ಬಿಟಿಎಂ ಲೇಔಟ್ ನಲ್ಲಿ ಗ್ಲೋಬಲ್ ಲರ್ನಿಂಗ್ ಅಂಡ್ ಎಜುಕೇಷನ್ ಕನ್ಸ್​ಲ್ಟೆನ್ಸಿ ಕಚೇರಿ ತೆರೆದಿದ್ದರು. ಇದೇ ರೀತಿ ನಗರದ ವಿವಿಧೆಡೆ ಜೆಪಿ ಕನ್ಸ್​ಲ್ಟೆನ್ಸಿ, ಎಜೆಎ ಇನ್ಫ್ರಾಸ್ಟ್ರಕ್ಚರ್, ನಾರಾಯಣ ಕನ್ಸ್​ಲ್ಟೆನ್ಸಿ ಹಾಗೂ ಐಆರ್ಎಸ್ ಕನ್ಸ್​ಲ್ಟೆನ್ಸಿ ಹೆಸರಿನಲ್ಲಿ ಕಚೇರಿ ತೆರೆದಿದ್ದರು. 
ಆರೋಪಿಗಳು ವಂಚನೆಯಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ವಿದೇಶ ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗುತ್ತಿದ್ದರು. ಜತೆಗೆ ಇವರು ಫ್ಲ್ಯಾಟ್ ಖರೀದಿಸಿದ್ದರು. ವಿವಿಧ ಕಂಪನಿಗಳಲ್ಲಿ 12.5 ಲಕ್ಷ ರುಪಾಯಿ ಹಣವನ್ನು ಷೇರುಗಳಲ್ಲಿ ಹೂಡಿಕೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ. 
ಬಂಧಿತರ ವಿರುದ್ಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT