ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ 
ರಾಜ್ಯ

ದೇಶದ ಇತರೆಡೆಯೂ ವಿರಳ ಸಂಚಾರ ದಿನ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಚಿವ ರೇವಣ್ಣ

ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಹಾಗೂ ವಾಹನ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಸಾರಿಗೆ ಇಲಾಖೆ ಆರಂಭಿಸಿರುವ ವಿರಳ ಸಂಚಾರ ದಿನ ಅಭಿಯಾನವನ್ನು ದೇಶದ ವಿವಿಧ ರಾಜ್ಯಗಳಲ್ಲೂ ಜಾರಿಗೊಳಿಸುವಂತೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು...

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಹಾಗೂ ವಾಹನ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಸಾರಿಗೆ ಇಲಾಖೆ ಆರಂಭಿಸಿರುವ ವಿರಳ ಸಂಚಾರ ದಿನ ಅಭಿಯಾನವನ್ನು ದೇಶದ ವಿವಿಧ ರಾಜ್ಯಗಳಲ್ಲೂ ಜಾರಿಗೊಳಿಸುವಂತೆ ಸಾರಿಗೆ ಸಚಿವ ಹೆಚ್.ಎಂ. ರೇವಣ್ಣ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಮನವಿ ಮಾಡಿಕೊಂಡಿದ್ದಾರೆ. 
ಫೆ.11ರಂದು ಬೆಂಗಳೂರು ನಗರದಲ್ಲಿ ವಿರಳ ಸಂಚಾರ ದಿನಕ್ಕೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆದ ಹೀಗಾಗಿ ದೇಶದ ಉಳಿದ ರಾಜ್ಯಗಳಲ್ಲೂ ಈ ಅಭಿಯಾನ ಜಾರಿಗೊಳಿಸುವಂತೆ ಪ್ರಧಾನಂತ್ರಿ ನರೇಂದ್ರ ಮೋದಿ, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದೇನೆಂದು ರೇವಣ್ಣ ಅವರು ಹೇಳಿದ್ದಾರೆ. 
ಮುಂದಿನ ವಿರಳ ಸಂಚಾರದ ದಿನದಂದು ಸಾರಿಗೆ ಇಲಾಖೆ ಅಧಿಕಾರಿಗಳು ಸರ್ಕಾರಿ ವಾಹನ ಬಳಸದಂತೆ ಸುತ್ತೋಲೆ ಹೊರಡಿಸಲಾಗುವುದು. ಉಳಿದ ಇಲಾಖೆ ಅಧಿಕಾರಿಗಳು ಸಮೂಹ ಸಾರಿಗೆ ಬಳಸುಂತೆ ಕರೆ ನೀಡಲಾಗುವುದು ಎಂದು ತಿಳಿಸಿದ್ದಾರೆ. 
ವಿರಳ ಸಂಚಾರ ದಿನಕ್ಕೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಮುಂದಿನ ತಿಂಗಳು ಮತ್ತಷ್ಟು ಪರಿಣಾಮಕಾರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನಗರದಲ್ಲಿ ಅಂದು ಶೇ.26ರಷ್ಟು ಮಾಲಿನ್ಯ ತಗ್ಗಿದೆ. ನಗದಲ್ಲಿ 78 ಲಕ್ಷಕ್ಕೂ ಅಧಿಕ ವಾಹನಗಳಿದ್ದು, ವಾಯುಮಾಲಿನ್ಯ ತಡೆಗಟ್ಟುವ ಸಲುವಾಗಿ ಸರ್ಕಾರ ಪ್ರತೀ ತಿಂಗಳ ಎರಡನೇ ಭಾನುವಾರದ ದಿನದಂದು ವಿರಳ ಸಂಚಾರ ದಿನ ಅಭಿಯಾನವನ್ನು ಆರಂಭಿಸಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ರ್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?

ದುಬೈ ICU ನಲ್ಲಿ ತಾಯಿ ಹೋರಾಟ: 1.25 ಕೋಟಿ ರೂ. ಆಸ್ಪತ್ರೆ ಬಿಲ್, ಯುದ್ಧದ ನಡುವೆ ನೆರವು ಯಾಚಿಸಿದ ಭಾರತೀಯ ವ್ಯಕ್ತಿ!

'ಐರಿಸ್ ಡೆನಾ' ದಾಳಿಗೆ ತಕ್ಕ ಪ್ರತ್ಯುತ್ತರ ನೀಡದೇ ಬಿಡುವುದಿಲ್ಲ: ಇರಾನ್ ಸೇನಾ ಮುಖ್ಯಸ್ಥ

SCROLL FOR NEXT