ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: ಪ್ರಮಾಣ ವಚನ ಸ್ವೀಕರಿಸಿದ ಹೈಕೋರ್ಟ್'ನ 5 ಹೊಸ ನ್ಯಾಯಮೂರ್ತಿಗಳು

ಕರ್ನಾಟಕ ಹೈಕೋರ್ಟ್'ಗೆ ನೂತನವಾಗಿ ನೇಮಕಗೊಂಡ ಐದು ಹೊಸ ನ್ಯಾಯಮೂರ್ತಿಗಳು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ...

ಬೆಂಗಳೂರು: ಕರ್ನಾಟಕ ಹೈಕೋರ್ಟ್'ಗೆ ನೂತನವಾಗಿ ನೇಮಕಗೊಂಡ ಐದು ಹೊಸ ನ್ಯಾಯಮೂರ್ತಿಗಳು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. 
ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೊಂಡ ನ್ಯಾಯಮೂರ್ತಿಗಳಾದ ದೀಕ್ಷಿತ್ ಕೃಷ್ಣ ಶ್ರೀಪಾದ, ಶಂಕರ ಗಣಪತಿ ಪಂಡಿತ್, ರಾಮಕೃಷ್ಣ ದೇವದಾಸ್, ಭೂತನಹೊಸೂರು ಮಲ್ಲಿಕಾರ್ಜುನ ಶ್ಯಾಮಪ್ರಸಾದ್ ಮತ್ತು ಸಿದ್ದಪ್ಪ ಸುನೀಲ್ ದತ್ ಯಾದವ್ ಅವರು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. 
ಖಾಲಿಯಿರುವ ನ್ಯಾಯಾಮೂರ್ತಿಗಳ ಹುದ್ದೆ ಶೀಘ್ರದಲ್ಲಿಯೇ ಭರ್ತಿ: ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ
ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಜರುಗಿಸುವುದಾಗಿ ನೂತನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿಯವರು ಬುಧವಾರ ಭರವಸೆ ನೀಡಿದ್ದಾರೆ. 
ಬೆಂಗಳೂರು ವಕೀಲರ ಸಂಘವು ಹೈಕೋರ್ಟ್ ವಕೀಲರ ಸಂಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿರುವ ಅವರು, ಕರ್ನಾಟಕ ಹೈಕೋರ್ಟ್ ನಲ್ಲಿ ಸಾಕಷ್ಟು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು, ಶೇ.60 ರಷ್ಟು ನ್ಯಾಯಮೂರ್ತಿಗಳ ಕೊರತೆಯಿದೆ. ಸದ್ಯ ಐವರು ನೂತನ ನ್ಯಾಯಮೂರ್ತಿಗಳು ನೇಮಕಗೊಂಡಿದ್ದಾರೆ. ಇದರಿಂದ ನ್ಯಾಯಮೂರ್ತಿಗಳ ಕೊರತೆ ಪ್ರಮಾಣ ಶೇ.50ಕ್ಕೆ ಇಳಿದಿದೆ. ಹೀಗಾಗಿ ಖಾಲಿಯಿರುವ ನ್ಯಾಯಾಮೂರ್ತಿಗಳ ಹುದ್ದೆಗಳ ಮತ್ತು ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಜರುಗಿಸಲಾಗುವುದು. ಅಲ್ಲದೆಸ ಎಲ್ಲಾ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT