ಕುಸಿದುಬಿದ್ದ ಕಟ್ಟಡ 
ರಾಜ್ಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ಸಾವು, 7 ಕಾರ್ಮಿಕರ ರಕ್ಷಣೆ

ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ...

ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.  
ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎಂಟು ಕಾರ್ಮಿಕರನ್ನು ರಕ್ಷಿಸಿದ್ದು, ಇನ್ನು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತ ಕಾರ್ಮಿಕರು ಬಿಹಾರ ಮೂಲದವರು ಎನ್ನಲಾಗಿದೆ.
ವಸತಿಗಾಗಿ ಈ ಐದು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಬಳಿಕ ವಾಣಿಜ್ಯ ಬಳಕೆಗಾಗಿ ಕಟ್ಟಡ ನವೀಕರಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಭೇಟಿ ನೀಡಿದ್ದು, ಹಳೆ ಅಡಿಪಾಯದ ಮೇಲೆ ಮೂರು ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ.
ಕಟ್ಟಡದ ಮಾಲೀಕರು ಯಾರು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ದಾಖಲೆಗಳನ್ನು ತೆಗೆದು ತೆಗೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮೇಯರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT