ಕುಸಿದುಬಿದ್ದ ಕಟ್ಟಡ 
ರಾಜ್ಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ಸಾವು, 7 ಕಾರ್ಮಿಕರ ರಕ್ಷಣೆ

ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ...

ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.  
ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎಂಟು ಕಾರ್ಮಿಕರನ್ನು ರಕ್ಷಿಸಿದ್ದು, ಇನ್ನು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಮೃತ ಕಾರ್ಮಿಕರು ಬಿಹಾರ ಮೂಲದವರು ಎನ್ನಲಾಗಿದೆ.
ವಸತಿಗಾಗಿ ಈ ಐದು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಬಳಿಕ ವಾಣಿಜ್ಯ ಬಳಕೆಗಾಗಿ ಕಟ್ಟಡ ನವೀಕರಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಭೇಟಿ ನೀಡಿದ್ದು, ಹಳೆ ಅಡಿಪಾಯದ ಮೇಲೆ ಮೂರು ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ.
ಕಟ್ಟಡದ ಮಾಲೀಕರು ಯಾರು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ದಾಖಲೆಗಳನ್ನು ತೆಗೆದು ತೆಗೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮೇಯರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ