ಜುಬೇರ್ 
ರಾಜ್ಯ

ಕಾಶ್ಮೀರದಲ್ಲಿನ ಭಯೋತ್ಪಾದಕರನ್ನು ಹೊಡೆದುರುಳಿಸಿ ದೇಶಕ್ಕೆ ಹೆಮ್ಮೆ ತಂದ ಕರ್ನಾಟಕದ ಯೋಧ

ಕಾಶ್ಮೀರ ಕಣಿವೆಯಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂಡ ಒಳ ನುಸುಳಿದ್ದ ಲಷ್ಕರ್-ಎ-ತೋಯ್ಬಾದ ಭಯೋತ್ಪಾದಕರನ್ನು ನಮ್ಮ ಸಿಆರ್ ಪಿಎಫ್ ಯೋಧರು ಹೊಡೆದುರುಳಿಸಿದ್ದಾರೆ.

ಮಂಗಳೂರು: ಕಾಶ್ಮೀರ ಕಣಿವೆಯಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂಡ ಒಳ ನುಸುಳಿದ್ದ ಲಷ್ಕರ್-ಎ-ತೋಯ್ಬಾದ ಭಯೋತ್ಪಾದಕರನ್ನು ನಮ್ಮ ಸಿಆರ್ ಪಿಎಫ್ ಯೋಧರು ಹೊಡೆದುರುಳಿಸಿದ್ದಾರೆ. ಕರಣ್ ನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಆರ್ ಪಿಎಫ್ ಯೋಧರ ತಂಡದಲ್ಲಿ ಕರ್ನಾಟಕದ ಕರಾವಳಿ ವೀರಯೋಧನೂ ಇದ್ದು ಉಗ್ರರೊಡನೆ ಹೋರಾಡಿದ ಅವರು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೇರಂಕಿ ಗ್ರಾಮದ ಜುಬೇರ್ ಕರಣ್ ನಗರದಲ್ಲಿ ನಡೆದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಇದೀಗ ಇಡೀ ದೇಶ ಹೆಮ್ಮೆ ಪಡುವಂತೆ ಮಾಡಿದ್ದಾರೆ. 
ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ ಜುಬೇರ್ ಮೊನ್ನೆ ನಡೆದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬಾದ ಉಗ್ರರು ನಿರ್ಮಾಣ ಹಂತದ ಕಟ್ಟಡದಲ್ಲಿ ಅಡಗಿ ಕುಳಿತಿದ್ದಾಗ ಕೆಲವೇ ಗಂಟೆಗಳಲ್ಲಿ ಉಗ್ರರನ್ನು ಹೊಡೆದುರುಳಿಸೋದರಲ್ಲಿ ಸಫಲರಾಗಿದ್ದರು.. 
ಚಿಕ್ಕಂದಿನಲ್ಲಿಯೇ ಸೇನೆಯನ್ನು ಸೇರಬೇಕೆನ್ನುವ ಆಸೆ ಹೊತ್ತಿದ್ದ ಜುಬೇರ್ ತಮ್ಮ ಸ್ವ ಪ್ರಯತ್ನದಿಂಡ ಸೇನೆಗೆ ಸೇರ್ಪಡೆಗೊಂಡಿದ್ದರು. ಇದೀಗ ದೇಶಕ್ಕೆ ಹೆಮ್ಮೆ ತಂದ ನಮ್ಮ ಕನ್ನಡ ನಾಡಿನ ಯೋಧನಿಗೆ ಒಂದು ಸಲಾಂ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT