ಜುಬೇರ್ 
ರಾಜ್ಯ

ಕಾಶ್ಮೀರದಲ್ಲಿನ ಭಯೋತ್ಪಾದಕರನ್ನು ಹೊಡೆದುರುಳಿಸಿ ದೇಶಕ್ಕೆ ಹೆಮ್ಮೆ ತಂದ ಕರ್ನಾಟಕದ ಯೋಧ

ಕಾಶ್ಮೀರ ಕಣಿವೆಯಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂಡ ಒಳ ನುಸುಳಿದ್ದ ಲಷ್ಕರ್-ಎ-ತೋಯ್ಬಾದ ಭಯೋತ್ಪಾದಕರನ್ನು ನಮ್ಮ ಸಿಆರ್ ಪಿಎಫ್ ಯೋಧರು ಹೊಡೆದುರುಳಿಸಿದ್ದಾರೆ.

ಮಂಗಳೂರು: ಕಾಶ್ಮೀರ ಕಣಿವೆಯಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂಡ ಒಳ ನುಸುಳಿದ್ದ ಲಷ್ಕರ್-ಎ-ತೋಯ್ಬಾದ ಭಯೋತ್ಪಾದಕರನ್ನು ನಮ್ಮ ಸಿಆರ್ ಪಿಎಫ್ ಯೋಧರು ಹೊಡೆದುರುಳಿಸಿದ್ದಾರೆ. ಕರಣ್ ನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಆರ್ ಪಿಎಫ್ ಯೋಧರ ತಂಡದಲ್ಲಿ ಕರ್ನಾಟಕದ ಕರಾವಳಿ ವೀರಯೋಧನೂ ಇದ್ದು ಉಗ್ರರೊಡನೆ ಹೋರಾಡಿದ ಅವರು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೇರಂಕಿ ಗ್ರಾಮದ ಜುಬೇರ್ ಕರಣ್ ನಗರದಲ್ಲಿ ನಡೆದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಇದೀಗ ಇಡೀ ದೇಶ ಹೆಮ್ಮೆ ಪಡುವಂತೆ ಮಾಡಿದ್ದಾರೆ. 
ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದ ಜುಬೇರ್ ಮೊನ್ನೆ ನಡೆದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬಾದ ಉಗ್ರರು ನಿರ್ಮಾಣ ಹಂತದ ಕಟ್ಟಡದಲ್ಲಿ ಅಡಗಿ ಕುಳಿತಿದ್ದಾಗ ಕೆಲವೇ ಗಂಟೆಗಳಲ್ಲಿ ಉಗ್ರರನ್ನು ಹೊಡೆದುರುಳಿಸೋದರಲ್ಲಿ ಸಫಲರಾಗಿದ್ದರು.. 
ಚಿಕ್ಕಂದಿನಲ್ಲಿಯೇ ಸೇನೆಯನ್ನು ಸೇರಬೇಕೆನ್ನುವ ಆಸೆ ಹೊತ್ತಿದ್ದ ಜುಬೇರ್ ತಮ್ಮ ಸ್ವ ಪ್ರಯತ್ನದಿಂಡ ಸೇನೆಗೆ ಸೇರ್ಪಡೆಗೊಂಡಿದ್ದರು. ಇದೀಗ ದೇಶಕ್ಕೆ ಹೆಮ್ಮೆ ತಂದ ನಮ್ಮ ಕನ್ನಡ ನಾಡಿನ ಯೋಧನಿಗೆ ಒಂದು ಸಲಾಂ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT