ಸಾಂದರ್ಭಿಕ ಚಿತ್ರ 
ರಾಜ್ಯ

5,000 ಯುವಕರಿಗೆ ತರಬೇತಿ ನೀಡಲು ಸಾಪ್ ಜೊತೆ ಕೈಜೋಡಿಸಿರುವ ಕರ್ನಾಟಕ ಸರ್ಕಾರ

ರಾಜ್ಯಾದ್ಯಂತ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ 5,000 ಮಂದಿ ಯುವಕರಿಗೆ ...

ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ 5,000 ಮಂದಿ ಯುವಕರಿಗೆ ವರ್ಷದಲ್ಲಿ ತರಬೇತಿ ನೀಡಲು ರಾಜ್ಯ ಸರ್ಕಾರ ಸ್ಯಾಪ್ ಸೆ ಕಂಪೆನಿ ಜೊತೆ ಒಪ್ಪಂದ ಮಾಡಿಕೊಂಡಿದೆ. ಯುವ ಯುಗ ಅಭಿಯಾನದಡಿ ಈ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಮಾಹಿತಿ ತಂತ್ರಜ್ಞಾನ ಆಧಾರಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಮಾಹಿತಿ ತಂತ್ರಜ್ಞಾನ ಮತ್ತು ಬಯೊಟೆಕ್ನಾಲಜಿ ಇಲಾಖೆ ಹಮ್ಮಿಕೊಂಡಿದೆ.
ನಿನ್ನೆ ನಗರದಲ್ಲಿ ನಡೆದ ಬ್ಲಾಕ್ ಚೈನ್ ಸಭೆಯಲ್ಲಿ ಇದನ್ನು ಪ್ರಕಟಿಸಿದ ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ, ಅತ್ಯಾಧುನಿಕ ಕೈಗಾರಿಕಾ ಕೌಶಲ್ಯಗಳನ್ನು ಕಲಿಯಲು ಯುವ ಯುಗ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಿದೆ. ಹೆಚ್ಚು ಔದ್ಯೋಗಿಕ ಪ್ರತಿಭೆಯನ್ನು ಒದಗಿಸಲು ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ರಾಜ್ಯಾದ್ಯಂತ ನೀಡಲಾಗುತ್ತದೆ. 
ಪದವೀಧರರು ಹೆಚ್ಚು ಜವಾಬ್ದಾರಿಯುತವಾಗಿ ಕೆಲಸ ಮಾಡಲು ಮತ್ತು ಕಲಿಕೆಯಿಂದ ಹೊರಗುಳಿಯುವ ಯುವಕರಿಗೆ ಕೂಡ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು. ಕರ್ನಾಟಕದ ಯುವಜನತೆ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಇಲ್ಲಿ ಹೂಡಿಕೆ ಮಾಡುವವರ ಸಂಖ್ಯೆ ಖಂಡಿತಾ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!

SCROLL FOR NEXT