ಸಾಂದರ್ಭಿಕ ಚಿತ್ರ 
ರಾಜ್ಯ

ಫೆ.20ರಿಂದ ಫಲಾನುಭವಿಗಳಿಗೆ ತ್ವರಿತ ಬಿಪಿಎಲ್ ಕಾರ್ಡು ವಿತರಣೆ

ಬಿಪಿಎಲ್ ಕುಟುಂಬಗಳು ಆದಾಯ ಪ್ರಮಾಣಪತ್ರವನ್ನು ನೀಡಿದರೆ ಸ್ಥಳದಲ್ಲಿಯೇ ತಕ್ಷಣಕ್ಕೆ ಬಿಪಿಎಲ್ ಕಾರ್ಡು...

ಬೆಂಗಳೂರು: ಬಿಪಿಎಲ್ ಕುಟುಂಬಗಳು ಆದಾಯ ಪ್ರಮಾಣಪತ್ರವನ್ನು ನೀಡಿದರೆ ಸ್ಥಳದಲ್ಲಿಯೇ ತಕ್ಷಣಕ್ಕೆ ಬಿಪಿಎಲ್ ಕಾರ್ಡು ನೀಡುವ ಅಭಿಯಾನಕ್ಕೆ ರಾಜ್ಯ ಸರ್ಕಾರ ಇದೇ 20ರಂದು ಚಾಲನೆ ನೀಡಲಿದೆ.
ಸುದ್ದಿಗೋಷ್ಠಿಯಲ್ಲಿ ನಿನ್ನೆ ಈ ವಿಷಯ ತಿಳಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್, ಫೆಬ್ರವರಿ 20ರಂದು ಅಭಿಯಾನವನ್ನು ಆರಂಭಿಸಲಾಗುವುದು.
ರೇಷನ್ ಕಾರ್ಡು ವಿತರಣೆಯ ಮೂರನೇ ಹಂತದಲ್ಲಿ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸ್ಥಳದಲ್ಲಿಯೇ ಕಾರ್ಡು ಪಡೆಯಲು ಅರ್ಹರಾಗಿರುತ್ತಾರೆ. ವರ್ಷಕ್ಕೆ 1.2 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಸ್ಥಳದಲ್ಲಿಯೇ ತಕ್ಷಣ ಬಿಪಿಎಲ್ ಕಾರ್ಡು ನೀಡಲಾಗುತ್ತದೆ. ರೇಷನ್ ಕಾರ್ಡಿನ ಮುದ್ರಣ ಪ್ರತಿಯನ್ನು ಫಲಾನುಭವಿಗಳ ವಿಳಾಸಕ್ಕೆ ಪೋಸ್ಟ್ ಮೂಲಕ ವಾರದೊಳಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.
ಈ ವ್ಯವಸ್ಥೆಯನ್ನು ವಿಕಲಾಂಗರು, ಪಿಂಚಣಿದಾರರು ಮತ್ತು ಇತರರಿಗೂ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ ಸಚಿವರು ಇದೀಗ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದರು. ಹೊಸ ಕಾರ್ಡುಗಳಲ್ಲದೆ ಈಗಿರುವ ಬಿಪಿಎಲ್ ಕಾರ್ಡುಗಳನ್ನು ನವೀಕರಿಸಲಿಚ್ಛಿಸುವವರು ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಯು.ಟಿ.ಖಾದರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT