ಸಂಗ್ರಹ ಚಿತ್ರ 
ರಾಜ್ಯ

ನಮ್ಮ ಮೆಟ್ರೋ: 19ರಿಂದ ಮೊದಲ ಕೋಚ್‏ನ ಮೊದಲ ಎರಡು ಬಾಗಿಲು ಮಹಿಳೆಯರ ಪ್ರವೇಶಕ್ಕಾಗಿ ಮಾತ್ರ

ಎಲ್ಲಾ ಮೆಟ್ರೋ ರೈಲುಗಳ ಲೋಕೊ ಪೈಲಟ್ (ಚಾಲಕ) ಆಸನದ ಹಿಂಭಾಗಕ್ಕೆ ಹೊಂದಿಕೊಂಡಿರುವ ಬೋಗಿಯ ಎರಡು ದ್ವಾರಗಳನ್ನು ಮಹಿಳೆಯರ ಪ್ರವೇಶ ಮತ್ತು ನಿರ್ಗಮನಕ್ಕೆ ಮೀಸಲಿಡಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್'ಸಿಎಲ್) ನಿರ್ಧರಿಸಿದ್ದು, ಫೆ.19ರಂದು...

ಬೆಂಗಳೂರು; ಎಲ್ಲಾ ಮೆಟ್ರೋ ರೈಲುಗಳ ಲೋಕೊ ಪೈಲಟ್ (ಚಾಲಕ) ಆಸನದ ಹಿಂಭಾಗಕ್ಕೆ ಹೊಂದಿಕೊಂಡಿರುವ ಬೋಗಿಯ ಎರಡು ದ್ವಾರಗಳನ್ನು ಮಹಿಳೆಯರ ಪ್ರವೇಶ ಮತ್ತು ನಿರ್ಗಮನಕ್ಕೆ ಮೀಸಲಿಡಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್'ಸಿಎಲ್) ನಿರ್ಧರಿಸಿದ್ದು, ಫೆ.19ರಂದು ಈ ಸೇವೆ ಕಾರ್ಯ ಆರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ. 
ಮೊದಲ ಎರಡು ಪ್ರವೇಶಾವಕಾಶಗಳನ್ನು ಮಹಿಳೆಯರಿಗೆ ನೀಡಲಾಗುತ್ತದೆ. ಈ ಸೇವೆ ಸೋಮವಾರ ಬೆಳಿಗ್ಗೆ 5 ಗಂಟೆಯಿಂದಲೇ ಆರಂಭಗೊಳ್ಳಲಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶುಕ್ರವಾರ ಮಧ್ಯಾಹ್ನದಿಂದಲೇ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ರಕಟಣೆಗಳನ್ನು ನೀಡಲಾಗುತ್ತಿದೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಬಿಎಂಆರ್'ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಅವರು ಮಾತನಾಡಿ, ಈ ಬಗ್ಗೆ ಎರಡು ದಿನಗಳ ಹಿಂದೆಯೇ ಬಿಇಎಂಎಲ್'ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಣೆ ಮಾಡಲಾಗಿತ್ತು. ಮಾರ್ಚ್ 1 ರಿಂದಲೇ ಈ ಸೇವೆಗಳನ್ನು ಆರಂಭಿಸಲು ನಿರ್ಧರಿಸಲಾಗಿತ್ತು. ಈ ಸೇವೆಗಳನ್ನು ಕಾರ್ಯರೂಪಕ್ಕೆ ತರಲು ತಿಂಗಳುಗಳಾದರೂ ಕಾಲಾವಕಾಶ ಬೇಕೆಂದು ತಿಳಿದಿದ್ದೆ. ಸೇವೆ ಆರಂಭಿಸಿದ ಬಳಿಕ ಎದುರಾಗುವ ಸಮಸ್ಯೆಗಳನ್ನು ಕಂಡುಕೊಳ್ಳುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯೋಗಿಕವಾಗಿ ಸೇವೆಯನ್ನು ಆರಂಭಿಸಲಾಗಿತ್ತು. ಈ ವೇಳೆ ಯಾವುದೇ ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ವರದಿ ಮಾಡಲಿಲ್ಲ. ಹೀಗಾಗಿ ಸೋಮವಾರದಿಂದಲೇ ಸೇವೆಯನ್ನು ಆರಂಭಿಸಲು ನಿರ್ಧರಿಸಿದ್ದೇವೆಂದು ಹೇಳಿದ್ದಾರೆ. 
ನಮ್ಮ ಮೆಟ್ರೋ ಪ್ರಧಾನ ವ್ಯವಸ್ಥಾಪಕ ಯು.ಎ. ವಸಂತ್ ರಾವ್ ಮಾತನಾಡಿ, ಸೋಮವಾರದೊಳಗಾಗಿ ಪ್ರಯಾಣಿಕರಿಗೆ ಈ ಬಗ್ಗೆ ತಿಳಿಸಲು ಸೇವೆಗಳ ಕುರಿತಂತೆ ಜನರಿಗೆ ಮಾಹಿತಿಗಳನ್ನು ತಲುಪಿಸಲು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಪ್ರತೀನಿತ್ಯ 3.6 ರಿಂದ 3.7 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಾರೆ. ಸಾಕಷ್ಟು ಮಹಿಳಾ ಪ್ರಯಾಣಿಕರು ನಮಗೆ ಪ್ರತ್ಯೇಕ ಬೋಗಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT