ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲ ಮನ್ನಾ: ಹೆಚ್ ಡಿ ಕುಮಾರಸ್ವಾಮಿ ಭರವಸೆ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. 
ಯಲಹಂಕಾದಲ್ಲಿ ನಡೆದ ಜೆಡಿಎಸ್ ನ ಕುಮಾರ ಪರ್ವ ಸಮಾವೇಶದಲ್ಲಿ ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ, ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ರೈತರಿಗೆ ಅನ್ಯಾಯ ಮಾಡಿದೆ. ರೈತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಗೆ ಅಧಿಕಾರ ನೀಡಬಾರದು ಎಂದು ರಾಜ್ಯದ ಜನತೆಗೆ ಕುಮಾರಸ್ವಾಮಿ ಕರೆ ನೀಡಿದ್ದಾರೆ. 
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ರಾಜ್ಯದಲ್ಲಿ ಈಗಲೂ ಅದೆಷ್ಟೋ ಕುಟುಂಬಗಳು ಒಂದು ಹೊತ್ತಿನ ಊಟಕ್ಕೂ ಸಂಕಷ್ಟ ಎದುರಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಆಡಳಿತದಲ್ಲಿ ಅಭಿವೃದ್ಧಿ 10 ವರ್ಷ ಹಿಂದಕ್ಕೆ ಹೋಗಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದಾರೆ. 
ಅಧಿಕಾರದ ಮದದಲ್ಲಿ ಸಿದ್ದರಾಮಯ್ಯ ಜನತೆಯ ಸಂಕಷ್ಟಗಳನ್ನು ಮರೆತಿದ್ದಾರೆ. ರಾಜ್ಯವನ್ನು ಅಭಿವೃದ್ಧಿಪಡಿಸಲು ನನಗೆ ಒಂದು ಅವಕಾಶ ನೀಡಿ, ನಾನು ಜನರ ಸಮಸ್ಯೆಗಳನ್ನು ಬಗೆಹರಿಸಲು ಮತ್ತೊಮ್ಮೆ ಸಿಎಂ ಆಗಬೇಕು ಜನರ ಸರ್ಕಾರ ಬೇಕೋ, ದರ್ಪ, ದುರಹಂಕಾರದ ಸರ್ಕಾರ ಬೇಕೋ ನಿರ್ಧರಿಸಿ ಎಂದು ಕುಮಾರಸ್ವಾಮಿ ರಾಜ್ಯದ ಜನತೆಗೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT