ಹೈಕೋರ್ಟಿನ (ಸಾಂದರ್ಭಿಕ ಚಿತ್ರ) 
ರಾಜ್ಯ

ರಾಜಕಾಲುವೆ ದುರಸ್ಥಿ, ನಿರ್ವಹಣೆ ಸಂಬಂಧ ವರದಿ ಸಲ್ಲಿಕೆಗೆ ಬಿಬಿಎಂಪಿ ಹೈಕೋರ್ಟಿಗೆ ಸೂಚನೆ

ಬೆಂಗಳೂರು ಮಹಾನಗರದಲ್ಲಿನ ಒಳಚರಂಡಿ ದುರಸ್ಥಿ, ನಿರ್ವಹಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವರದಿ ಸಲ್ಲಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.

ಬೆಂಗಳೂರು:ಬೆಂಗಳೂರು ಮಹಾನಗರದಲ್ಲಿನ ರಾಜಕಾಲುವೆ  ದುರಸ್ಥಿ, ನಿರ್ವಹಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವರದಿ ಸಲ್ಲಿಸುವಂತೆ ಹೈಕೋರ್ಟ್  ಬಿಬಿಎಂಪಿಗೆ ಸೂಚನೆ ನೀಡಿದೆ.

ಕಳೆದ ಮೂರು ವರ್ಷಗಳಲ್ಲಿ  ಕೇವಲ  177 ಕಿಲೋ ಮೀಟರ್ ದೂರದ  ರಾಜಕಾಲುವೆ
ವ್ಯವಸ್ಥೆಯನ್ನು ಮಾತ್ರ ದುರಸ್ಥಿ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್, ಸುನೀಲ್ ದತ್ತ್ ಯಾದವ್ ನೇತೃತ್ವದ ವಿಭಾಗೀಯ ಪೀಠ  ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಪ್ರಕಾರ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸುವಂತೆ  ಬಿಬಿಎಂಪಿಗೆ ಸೂಚಿಸಿದೆ.

ಬೆಂಗಳೂರು ಮಹಾನಗರದಲ್ಲಿನ ರಾಜಕಾಲುವೆ  ವ್ಯವಸ್ಥೆ  ಕುರಿತಂತೆ ನಾಗರಿಕ ಕ್ರಿಯಾ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಹೀಗೆ ಸೂಚನೆ ನೀಡಿದೆ.

ನಗರದಲ್ಲಿ ಒಟ್ಟಾರೇ,842 ಕಿಲೋ ಮೀಟರ್ ದೂರ ರಾಜಕಾಲುವೆ ವ್ಯವಸ್ಥೆ ಇದ್ದು, 1,367  ಕೋಟಿ ರೂ ವೆಚ್ಚದಲ್ಲಿ 177 ಕಿಲೋ ಮೀಟರ್ ದೂರದ ವ್ಯವಸ್ಥೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇನ್ನೂ 192 ಕಿಲೋ ಮೀಟರ್ ದೂರದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಬಿಬಿಎಂಪಿ ಹೈಕೋರ್ಟಿಗೆ ಮಾಹಿತಿ ನೀಡಿದೆ.

ಸುಮಾರು 155 ಕಿಲೋ ಮೀಟರ್  ದೂರದ ರಾಜಕಾಲುವೆ  ಲಿ ನಿರ್ವಹಣಾ ಕಾಮಗಾರಿ ಪ್ರಗತಿಯಲಿದೆ. ಇನ್ನೂ 239 ಕಿಲೋ ಮೀಟರ್ ದೂರದ ನಿರ್ವಹಣೆಗಾಗಿ 42. 70 ಕೋಟಿ ರೂ. ಸಲ್ಲಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT