ಜಗ್ಗೇಶ್ 
ರಾಜ್ಯ

ನಾನು ತುಮಕೂರಿನವ, ನಾನು ಒಕ್ಕಲಿಗ ಕನ್ನಡ ಮಾತನಾಡುತ್ತೇವೆ: ಜಗ್ಗೇಶ್

ರಾಜ್ಯದ ಮೂರು ಜಿಲ್ಲೆಯವರಷ್ಟೇ ಶುದ್ದ ಕನ್ನಡ ಮಾತನಾಡುತ್ತಾರೆ, ಉಳಿದವರಿಗೆ ಆ ಯೋಗ್ಯತೆ ಇಲ್ಲ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗೆ .........

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಯವರಷ್ಟೇ ಶುದ್ದ ಕನ್ನಡ ಮಾತನಾಡುತ್ತಾರೆ, ಉಳಿದವರಿಗೆ ಆ ಯೋಗ್ಯತೆ ಇಲ್ಲ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗೆ ನಾಡಿನಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ನಟ, ಬಿಜೆಪಿ ನಾಯಕರೂ ಆಗಿರುವ ನವರಸ ನಾಯಕ ಜಗ್ಗೇಶ್ ಸಹ ಖಾರವಾಗಿ ಪ್ರತಿಕ್ರಯಿಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅನಂತ್ ಕುಮಾರ್ ಹೆಗಡೆಯವರ ಹೇಳಿಕೆಯ ಬಗ್ಗೆ ಟೀಕಿಸಿರುವ ಜಗ್ಗೇಶ್ 'ನೀವು ವ್ಯಾಕರಣ ಶುದ್ದವಾಗಿ ಕನ್ನಡ ಮಾತನಾಡುತ್ತೀರಿ. ಅದು ನನಗೆ ಇಷ್ಟವಾಗಿದೆ.ಹಾಗೆಂದು ಉಳಿದ ಭಾಗದ ಕನ್ನಡಿಗರು ಕನ್ನಡ ಮಾತನಾಡಲು ಬಾರದವರು ಎನ್ನುವುದು ಸರಿಯಲ್ಲ. ನಾಡಿನ ಪ್ರತಿಯೊಂದು ಭಾಗಕ್ಕೆ ಅದರದೇ ಆದ ಭಾಷಾ ಸೊಗಡಿದೆ' ಎಂದಿದ್ದಾರೆ.
ಅಷ್ಟೇ ಅಲ್ಲದೆ 'ನಾನು ತುಮಕೂರು ಗ್ರಾಮೀಣ ಭಾಗದವನು. ನನ್ನ ಭಾಗದಲ್ಲಿ ಗ್ರಾಮೀಣ ಒಕ್ಕಲಿಗ ಮನೆತನದ ಭಾಷೆ ಮಾತನಾಡುತ್ತೇವೆ. ಕಲಾವಿದನಾಗಿ ನಾನು ಎಲ್ಲಾ ವರ್ಗದ ಭಾಷೆ ತಪ್ಪಿಲ್ಲದೆ ಬಳಸುತ್ತೇನೆ. ನನಗೆ ಇಷ್ಟರ ಮಟ್ಟಿಗೆ ವ್ಯಾಕರಣದ ತಾಲೀಮು ಇದೆ. ಮಕ್ಕಳಿಗೆ ವ್ಯಾಕರಣ ಶುದ್ದ ಕನ್ನಡ ಕಲಿಯುವದಕ್ಕೆ ಪ್ರೇರೇಪಿಸಿರಿ' ಎಂದಿದ್ದಾರೆ.
ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜನರು ಮಾತ್ರವೇ ಶುದ್ದ ಕನ್ನಡ ಮಾತನಾಡಬಲ್ಲರು ಎಂದು ನಿನ್ನೆ ಪುತ್ತೂರಿನ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪ

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಪೂಮಾದಿಂದ 300 ಕೋಟಿ ಆಫರ್ ಕೈಬಿಟ್ಟ ಕೊಹ್ಲಿ: ತನ್ನದೇ ಬ್ರ್ಯಾಂಡ್ ಗಾಗಿ ಹೊಸ ಡೀಲ್, 40 ಕೋಟಿ ರೂ. ಹೂಡಿಕೆ!

ಮಳೆ, ಚಳಿಯಿಂದಾಗಿ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55ರಷ್ಟು ಕುಸಿತ: ಸಚಿವ ತಿಮ್ಮಾಪುರ

SCROLL FOR NEXT