ಬಂದೂಕಿನ (ಸಾಂದರ್ಭಿಕ ಚಿತ್ರ) 
ರಾಜ್ಯ

ಶಿವಾಜಿ ಜಯಂತಿ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಕಾರ್ಪೋರೇಟರ್

ಇಲ್ಲಿನ ಶಿವಾಜಿ ವೃತ್ತದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಕಾಂಗ್ರೆಸಿನ ನಾಮನಿರ್ದೇಶಿತ ಕಾರ್ಪೋರೇಟರ್ ಮಂಜುನಾಥ್ ಕದಮ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಧಾರವಾಡ: ಇಲ್ಲಿನ ಶಿವಾಜಿ ವೃತ್ತದಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಕಾಂಗ್ರೆಸಿನ ನಾಮನಿರ್ದೇಶಿತ ಕಾರ್ಪೋರೇಟರ್  ಮಂಜುನಾಥ್ ಕದಮ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಜಯಂತೋತ್ಸವದಲ್ಲಿ ಮೈ ಮರೆತಿದ್ದ  ಮಂಜುನಾಥ್ ಕದಂ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ . ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತವಾರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಆತನಿಂದ ಬಂದೂಕು ಪಡೆದು ವಿಚಾರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂದೂಕು ಪರವಾನಗಿ ಹೊಂದಿದ್ದು, ಘಟನೆ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉದ್ದೇಶಪೂರ್ವಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಂದು ವೇಳೆ ತಪಿತಸ್ಥರು ಎಂದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎಂ. ಎನ್. ನಾಗರಾಜ್ ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಬೆದರಿಕೆಗಳಿಗೆ ಹೆದರಲ್ಲ, ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು, ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!