ಮೊಹಮ್ಮದ್ ಹ್ಯಾರೀಸ್ ನಳಪಾಡ್ 
ರಾಜ್ಯ

ವಿದ್ವತ್ ಹಲ್ಲೆ ಪ್ರಕರಣ: ಆರೋಪಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಪೊಲೀಸರಿಗೆ ಶರಣು

ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪೊಲೀಸರಿಗೆ ಶರಣಾಗಿದ್ದಾನೆ...

ಕಬ್ಬನ್ ಪಾರ್ಕ್(ಬೆಂಗಳೂರು): ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪೊಲೀಸರಿಗೆ ಶರಣಾಗಿದ್ದಾನೆ. 
ವಿದ್ವತ್ ಮೇಲಿನ ಹಲ್ಲೆ ಬಳಿಕ ತಲೆಮರೆಸಿಕೊಂಡಿದ್ದ ಮೊಹಮ್ಮದ್ ನಲಪಾಡ್ ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಬಳಿಕ 37 ಗಂಟೆಗಳ ಕಾಲ ತಲೆ ಮರೆಸಿಕೊಂಡಿದ್ದ ಮೊಹಮ್ಮದ್ ನಲಪಾಡ್ ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದರು. 
ಇಂದು ಆಟೋದಲ್ಲಿ ಬಂದ ನಲಪಾಡ್ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ಸಂಬಂಧ ನಿನ್ನೆ ಕಬ್ಬನ್ ಪಾರ್ಕ್ ಪೊಲೀಸರು ಐವರನ್ನು ಬಂಧಿಸಿದ್ದರು. 
ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಫೆ.17 ರಂದು ರಾತ್ರಿ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್ ಎಂಬ ಯುವಕನಿಗೆ ಮನಬಂದಂತೆ ಥಳಿಸಿದ್ದಾರೆ. ಹಲ್ಲೆ ಪ್ರಕರಣ ನಂತರ ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್ ನಾಪತ್ತೆಯಾಗಿದ್ದ.
ಶಾಸಕ ಹ್ಯಾರಿಸ್ ಪುತ್ರ ನಡೆಸಿದ್ದ ಹಲ್ಲೆ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ಹಲ್ಲೆ ಪ್ರಕರಣ ನಂತರ  ಈ ಹಿನ್ನೆಲೆಯಲ್ಲಿ ಸಂಜೆಯೊಳಗೆ ಎಲ್ಲಾ ಆರೋಪಿಗಳ ಬಂಧಿಸದಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದರು. ರಾತ್ರಿ 8 ಗಂಟೆವರೆಗೂ ಬಂಧಿಸದೇ ಇದ್ದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಲು ಆದೇಶ ಹೊರಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT