ಶಾಸಕನ ಪುತ್ರನ ರೌಡಿಸಂ ಪ್ರಕರಣ: ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೂ ಎಫ್ಐಆರ್ 
ರಾಜ್ಯ

ಶಾಸಕನ ಪುತ್ರನ ರೌಡಿಸಂ ಪ್ರಕರಣ: ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೂ ಎಫ್ಐಆರ್

ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ರೌಡಿಸಂ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ರೌಡಿಸಂ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಫೆ.17ರಂದು ವಿದ್ವತ್ ತನ್ನ ಸ್ನೇಹಿತರೊಂದಿಗೆ ಊಟ ಮಾಡಲು ಯು.ಬಿ.ಸಿಟಿಗೆ ಬಂದಿದ್ದರು. ಈ ವೇಳೆ ವಿದ್ವತ್ ಹಾಗೂ ನಲಪಾಡ್ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ವತ್ ಅವರು ನಾನು ಯಾರು ಗೊತ್ತಾ...? ನನ್ನ ಅಪ್ಪ ಯಾರು ಗೊತ್ತಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ವಿದ್ವತ್ ಹಾಗೂ ಸ್ನೇಹಿತರು ಏಕಾಏಕಿ ಅರುಣ್ ಬಾಬು ಎಂಬುವವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. 
ಉದ್ಯಮಿ ಲೋಕಿ ಅಲಿಯಾಸ್ ಲೋಕನಾಥನ್ ಅವರ ಪುತ್ರ ವಿದ್ವತ್, ಅತಿಯಾಗಿ ಕುಡಿದಿದ್ದರಿಂದಾಗಿ ಸ್ವತಃ ಬಿದ್ದು ಮುಖಕ್ಕೆ ಗಾಯವಾಗಿದೆ ಎಂದು ಅರುಣ್ ಬಾಬು ಅವರು ದೂರು ನೀಡಿದ್ದರು. ಆದರೆ, ಮಲ್ಯ ಆಸ್ಪತ್ರೆಯಲ್ಲಿ ವಿದ್ವತ್ ಅವರನ್ನು ವೈದ್ಯಕೀಯ ತಪಾಸಣೆ ನಡೆಸಿದ್ದ ವೈದ್ಯರು ವಿದ್ವತ್ ಮದ್ಯ ಸೇವನೆ ಮಾಡಿದ್ದ ಎಂದು ಹೇಳಿದ್ದಾರೆ. 
ಪ್ರಸ್ತತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದು, ಈತನ ವಿರುದ್ಧ ಪೊಲೀಸರು ಐಸಿಸಿ ಸೆಕ್ಷನ್ 307 (ಕೊಲೆ ಯತ್ನ)ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT