ಬಂಧಿತ ನಲಪಾಡ್ 
ರಾಜ್ಯ

ಪುತ್ರನಿಂದ ಹಲ್ಲೆ: ವಿಧಾಸಭೆಯಲ್ಲಿ ಕ್ಷಮೆಯಾಚಿಸಿದ ಕಾಂಗ್ರೆಸ್ ಶಾಸಕ ಹ್ಯಾರಿಸ್

ಆಡಳಿತರೂಢ ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಅವರು ನಗರದ ಪ್ರತಿಷ್ಠಿತ ಯುಬಿ ಸಿಟಿಯ ಪಬ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ....

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಅವರು ನಗರದ ಪ್ರತಿಷ್ಠಿತ ಯುಬಿ ಸಿಟಿಯ ಪಬ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ತಮ್ಮ ಪುತ್ರ ಭಾಗಿಯಾಗಿರುವುದಕ್ಕೆ ಮಂಗಳವಾರ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. 
ಕೆಲವೊಮ್ಮೆ, ಕೆಲ ಕೆಟ್ಟ ಸಂದರ್ಭಗಳಲ್ಲಿ ಇಂತಹ ಘಟನೆಗಳು ಸಂಭವಿಸುತ್ತವೆ. ಈ ಘಟನೆಗಾಗಿ ನಾನು ಸದನ ಮತ್ತು ಸದಸ್ಯರ ಕ್ಷಮೆಯಾಚಿಸುತ್ತೇನೆ ಎಂದು ಹ್ಯಾರಿಸ್ ಅವರು ವಿಧಾನಸಭೆಗೆ ತಿಳಿಸಿದರು.
ಕಳೆದ ಶನಿವಾರ ರಾತ್ರಿ ಯುಬಿ ಸಿಟಿಯ ಪಬ್ ಕಮ್ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರ ವಿರುದ್ಧ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ನಿನ್ನೆ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದ ಆರೋಪಿ ಮಹಮ್ಮದ್ ನಲಪಾಡ್ ಹ್ಯಾರಿಸ್ ಈಗ ಪೊಲೀಸ್ ವಶದಲ್ಲಿದ್ದಾರೆ.
ಘಟನೆಯ ನಂತರ ಆರೋಪಿ ನಲಪಾಡ್ ನನ್ನು ಕಾಂಗ್ರೆಸ್ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ನಲಪಾಡ್ ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನಿ ಕಾರ್ಯದರ್ಶಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT