ಪೊಲೀಸರೊಂದಿಗೆ ನ್ಯಾಯಾಲಯಕ್ಕೆ ಆಗಮಿಸುತ್ತಿರುವ ಮೊಹಮದ್ ನಲಪಾಡ್ 
ರಾಜ್ಯ

ಶಾಸಕ ಹ್ಯಾರಿಸ್ ಪುತ್ರನನ್ನು ಸಾಮಾನ್ಯ ಆರೋಪಿಯಂತೆ ಕಾಣದೆ ರಾಜಾತಿಥ್ಯ ನೀಡುತ್ತಿರುವ ಪೊಲೀಸರು?

ಹಲ್ಲೆ ಪ್ರಕರಣದ ಆರೋಪದಲ್ಲಿ ಪೊಲೀಸರಿಗೆ ಶರಣಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್‌ ಗೆ ಪೊಲೀಸರು ಠಾಣೆಯಲ್ಲೇ ರಾಜಾತಿಥ್ಯ ನೀಡುತ್ತಿದ್ದಾರೆ ...

ಬೆಂಗಳೂರು: ಹಲ್ಲೆ ಪ್ರಕರಣದ ಆರೋಪದಲ್ಲಿ ಪೊಲೀಸರಿಗೆ ಶರಣಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ  ಮೊಹಮದ್‌ ಗೆ ಪೊಲೀಸರು ಠಾಣೆಯಲ್ಲೇ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಘಟನೆ ನಡೆದು 24 ಗಂಟೆ ಕಳೆದರೂ ಭಾನುವಾರ ಸಂಜೆ  ಆರೋಪಿಯ ಸಹಚರರನ್ನು ಬಂಧಿಸಿದ ಪೊಲೀಸರು, ಪ್ರಕರಣದ ಪ್ರಮುಖ ಆರೋಪಿ ಮಹಮಹದ್ ಇರುವ ಜಾಗ ಗೊತ್ತಿದ್ದರೂ  ಬಂಧಿಸಲಿಲ್ಲ. 
ಸೋಮವಾರ ಬೆಳಗ್ಗೆ ಶಾಸಕ ಹ್ಯಾರಿಸ್ ಮನೆಗೆ ಪೊಲೀಸರ ತಂಡ ಭೇಟಿ ನೀಡಿ ಮಹಮದ್ ಗಾಗಿ ಪರಿಶೀಲನೆ ನಡೆಸಿತು. ಈ ವೇಳೆ ತಾವೇ ಬುದ್ದಿ ಹೇಳಿ ತಮ್ಮ ಮಗನನ್ನು ಶರಣಾಗತಿ ಮಾಡಿಸುವುದಾಗಿ ಹ್ಯಾರಿಸ್ ಭರವಸೆ ನೀಡಿದರು. ಶಾಸಕರ ಮಾತಿನ ಮೇಲೆ ನಂಬಿಕೆ ಇಟ್ಟ ಪೊಲೀಸ್ ತಂಡ ಅವರ ಮನೆಯಿಂದ ವಾಪಾಸಾಯಿತು. ಇದಾದ 1 ಗಂಟೆಯ ನಂತರ ಮೊಹಮದ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.
ಆದರೆ ಪೊಲೀಸರಿಗೆ ಶರಣಾದ ಮೊಹಮದ್ ನನ್ನು ಪೊಲೀಸರು ಸಾಮಾನ್ಯಆರೋಪಿಯಂತೆ ಪರಿಗಣಿಸದೇ ಆತನಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ  ಆರೋಪಗಳು ಕೇಳಿ ಬರುತ್ತಿವೆ. ಕಬ್ಬನ್‌ ಪಾರ್ಕ್‌ ಠಾಣೆಗೆ ಸಿಸಿಬಿ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ, ಯುಬಿ ಸಿಟಿ ಮಾಲ್ ಗೆ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ.
ಮಧ್ಯಾಹ್ನ 1.30 ರ ವೇಳೆಗೆ ಮೊಹಮದ್‌ ಠಾಣೆಗೆ ಶರಣಾಗಲು ಬಂದಾಗ, ಸ್ಥಳದಲ್ಲಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು.  ಪ್ರಿನ್ಸ್ ನಲಪಾಡ್ ಎಂದು ಘೋಷೆ ಕೂಗಿದರು. ಈ ವೇಳೆ ಮೊಹಮದ್ ಬರುವುದನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮಗಳ ಕ್ಯಾಮೆರಾಗಳನ್ನು ಎಳೆದಾಡಲಾಯಿತು. ಕೆಲವರು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದರು. ಈ ವೇಳೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ಬಲವಂತವಾಗಿ ಮಾಧ್ಯಮಗಳ ಕ್ಯಾಮೆರಾಮನ್ ಗಳನ್ನು ಕಳುಹಿಸಲಾಯಿತು, 
ಇನ್ನೂ ಹಲ್ಲೆಯಿಂದ ಗಾಯಗೊಂಡಿರುವ ವಿದ್ವತ್ ಗೆ ಮೂಗಿನ ಮೂಳೆ ಮರಿದಿದೆ. ಮಲ್ಯ ಆಸ್ಪತ್ರೆ  ವೈದ್ಯರು ಸರ್ಜರಿ ಮಾಡುವ ಬದಲು ಸ್ವಾಭಾವಿಕವಾಗಿಯೇ ಗಾಯ ವಾಸಿಯಾಗುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ, 4 ವಾರಗಳಲ್ಲಿ ಗಾಯ ವಾಸಿಯಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT