ಸಾಂದರ್ಬಿಕ ಚಿತ್ರ 
ರಾಜ್ಯ

ಕರ್ನಾಟಕ: ವನ್ಯಜೀವಿಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ರೈತರ ವಿದ್ಯುತ್ ಪರಿವರ್ತಕ ತಂತಿ ಬೇಲಿ

ಬೆಳೆಗಳ ರಕ್ಷಣೆಗಾಗಿ ರೈತರು ಅಕ್ರಮವಾಗಿ ಹಾಕುತ್ತಿರುವ ವಿದ್ಯುತ್ ಪರಿವರ್ತಕ ತಂತಿ ಬೇಲಿಗಳು ವನ್ಯಜೀವಿಗಳಿಗೆ ಆಪತ್ತನ್ನು ಎದುರು ಮಾಡುತ್ತಿವೆ...

ಬೆಂಗಳೂರು: ಬೆಳೆಗಳ ರಕ್ಷಣೆಗಾಗಿ ರೈತರು ಅಕ್ರಮವಾಗಿ ಹಾಕುತ್ತಿರುವ ವಿದ್ಯುತ್ ಪರಿವರ್ತಕ ತಂತಿ ಬೇಲಿಗಳು ವನ್ಯಜೀವಿಗಳಿಗೆ ಆಪತ್ತನ್ನು ಎದುರು ಮಾಡುತ್ತಿವೆ. 
ಚಾಮರಾಜನಗರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎರಡು ಚಿರತೆಗಳು ಮೃತಪಟ್ಟಿದ್ದವು. ಕೊಳ್ಳೆಗಾಲ ತಾಲ್ಲೂಕಿನ ತಿಮ್ಮರಾಜೀಪುರ ಗ್ರಾಮದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ 4 ವರ್ಷದ ಚಿರತೆ ಸಾವನ್ನಪ್ಪಿದೆ. 
ರೈತ ಸುರೇಶ್ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದ ಜೋಳದ ಫಸಲಿನ ರಕ್ಷಣೆಗಾಗಿ ವಿದ್ಯುತ್ ತಂತಿ ಬೇಲಿ ಹಾಕಿದ್ದಾರೆ. ಇದನ್ನು ದಾಟಲು ಬಂದಿರುವ ಚಿರತೆಗೆ ವಿದ್ಯುತ್ ತಗುಲಿದೆ. ವಿದ್ಯುತ್ ಪ್ರಮಾಣ ತೀವ್ರವಿದ್ದರಿಂದ ಚಿರತೆಯ ಕತ್ತಿನ ಭಾಗ ಸುಟ್ಟುಹೋಗಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಪ್ರಕರಣ ಸಂಬಂಧ ಪೊಲೀಸರು ರೈತ ಸುರೇಶ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ. 
ರೈತರನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಹಾಗೂ ಕೆಪಿಟಿಸಿಎಲ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಪ್ರದೇಶದಲ್ಲಿ ಚಿರತೆಗಳ ಸಂಖ್ಯೆ ಉತ್ತಮವಾಗಿದೆ. ತಮ್ಮ ಬೆಳೆಗಳು ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಇಲ್ಲಿನ ರೈತರು ವಿದ್ಯುತ್ ಪರಿವರ್ತಕ ಬೇಲಿಗಳನ್ನು ಹಾಕಿಕೊಳ್ಳುತ್ತಿದ್ದಾರೆ ಎಂು ಅಧಿಕಾರಿಗಳು ಹೇಳಿದ್ದಾರೆ. 
2017 ಜನವರಿ ತಿಂಗಳಿನಲ್ಲಿ ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಪ್ರದೇಶಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ 13 ಚಿರತೆಗಳು ಹಾಗೂ ಆನೆಗಳು ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿವೆ. ಚಿರತೆ ಹಾಗೂ ಆನೆಗಳು ಸುಲಭವಾಗಿ ಸಿಗುವ ಆಹಾರವನ್ನು ಅರಸಿ ಬರುತ್ತವೆ. ಚಿರತೆಗಳು ಬೀದಿ ನಾಯಿಗಳು ಹಾಗೂ ಕುರಿಗಳನ್ನು ಹುಡುಕಿಕೊಂಡು ಬಂದರೆ, ಆನೆಗಳು ಬಾಳೆಹಣ್ಣು, ಕಬ್ಬು ಹಾಗೂ ತೆಂಗನ್ನು ಹುಡುಕಿಕೊಂಡು ಬರುತ್ತವೆ. 
ವನ್ಯಜೀವಿ ಹೋರಾಟಗಾರ ಜಿ.ವೀರೇಶ್ ಅವರು ಮಾತನಾಡಿ, ಭದ್ರಾದಲ್ಲಿ ಕಳೆದ 4-5 ವರ್ಷಗಳಿಂದ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪುತ್ತಿರುವ ಆನೆಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಸಂಬಂಧ ಅಧಿಕಾರಿಗಳು ಯಾವುದೇ ರೀತಿಯ ಕಠಿಣ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT