ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಬೆಂಗಳೂರು-ಮೈಸೂರು ಷಟ್ಪಥ ಹೆದ್ದಾರಿ ಯೋಜನೆಗೆ ಕೇಂದ್ರದಿಂದ ರು. 2,920 ಕೋಟಿ

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ 275 ವಿಸ್ತರಣೆಗೆ 2,920 ಕೋಟಿ ರುಪಾಯಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ.

ನವದೆಹಲಿ: ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ 275 ವಿಸ್ತರಣೆಗೆ 2,920 ಕೋಟಿ ರುಪಾಯಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ 6 ಪಥದ ನಿಡಗಟ್ಟ -ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಅನ್ನು 74 ಕಿ.ಮೀ.ನಿಂದ 135 ಕಿ.ಮೀ ವರೆಗೆ ಅಭಿವೃದ್ಧಿ ಪಡಿಸಲು ಒಪ್ಪಿಗೆ ಸೂಚಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಭೂಸ್ವಾಧೀನ ಹಾಗೂ ಕಾಮಗಾರಿ ಪೂರ್ವ ಚಟುವಟಿಕೆಗಳಿಗಾಗಿ 81 ಕೋಟಿ ರುಪಾಯಿ ಮೀಸಲಿಡಲಾಗಿದೆ.
ಒಟ್ಟು 61 ಕಿ.ಮೀ ಆರು ಪಥದ ಹೆದ್ದಾರಿ ಅಭಿವೃದ್ಧಿ ಅಂದಾಜು 2,919 ಕೋಟಿ ರುಪಾಯಿ ವೆಚ್ಚವಾಗಲಿದ್ದು, ಈ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT