ರಾಜ್ಯ

ಅಮಿತ್ ಶಾ ಸಮಾವೇಶದ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರ ಮೇಲೆ ಹಲ್ಲೆ: ಮೂವರಿಗೆ ಗಾಯ

Srinivas Rao BV
ಪಣಂಬೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಉದ್ದೇಶಿಸಿ ಮಾತನಾಡಿದ ಸಮಾವೇಶವನ್ನು ಮುಗಿಸಿ ವಾಪಸ್ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮಂಗಳೂರಿನ ಬೆಂಗೆರೆ ಗ್ರಾಮದ ಬಳಿ ನಡೆದಿದೆ. 
ಮಲ್ಪೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೀನುಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶವನ್ನು ಮುಕ್ತಾಯಗೊಳಿಸಿಕೊಂಡು ವಾಪಸ್ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ 30-40 ದುಷ್ಕರ್ಮಿಗಳು ಚಾಕು, ಬ್ಲೇಡ್ ಗಳಿಂದ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಮೂವರಿಗೆ  ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಘಟನೆ ವರದಿಯಾಗುತ್ತಿದ್ದಂತೆಯೇ ಪಣಂಬೂರು ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 
SCROLL FOR NEXT