ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: ಹೆದ್ದಾರಿ ವಿಸ್ತರಣೆಗೆ ರಾಮ ಮಂದಿರ, ಮಸೀದಿ ಏಕ ಕಾಲಕ್ಕೆ ತೆರವು

ರಾಯಚೂರು ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ರಾಷ್ಟ್ರೀಯ ಹೆದ್ದಾರಿ(ಸಂಖ್ಯೆ 167) ವಿಸ್ತರಣೆ ಕಾಮಗಾರಿಯಲ್ಲಿ...

ರಾಯಚೂರು: ರಾಯಚೂರು ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ರಾಷ್ಟ್ರೀಯ ಹೆದ್ದಾರಿ(ಸಂಖ್ಯೆ 167) ವಿಸ್ತರಣೆ ಕಾಮಗಾರಿಯಲ್ಲಿ ಅಡ್ಡಲಾಗಿದ್ದ ನಗರದ ರಾಮಮಂದಿರ ಹಾಗೂ ಅಂಬೇಡ್ಕರ್ ವೃತ್ತ ಪಕ್ಕದ ಮಸೀದಿ ಎರಡನ್ನೂ ಏಕಕಾಲಕ್ಕೆ ತೆರವು ಮಾಡಿದ್ದಾರೆ.
ನಿನ್ನೆ ರಾತ್ರಿ ಮಂದಿರ ಹಾಗೂ ಮಸೀದಿಯ ಸುಮಾರು ಆರು ಅಡಿಗಳಷ್ಟು ಭಾಗವನ್ನು ಒಡೆದು ಹಾಕಲಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸರು ರಾತ್ರಿಯಿಂದಲೆ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಹಿತಕರ ಘಟನೆ ನಡೆದ ಬಗ್ಗೆ ಇದುವರೆಗೂ ವರದಿಯಾಗಿಲ್ಲ, ತೆರವು ಕಾರ್ಯಾಚರಣೆ ಸುಗಮವಾಗಿ ನಡೆದಿದೆ.
ಸ್ಥಳದಲ್ಲಿ ಪೊಲೀಸ್ ಬಸ್ ಬಿಡುಬಿಟ್ಟಿದೆ. ಈ ಹಿಂದೆ ಅನೇಕ ಸಲ ತೆರವು ಕಾರ್ಯಾಚರಣೆ ಮಾಡುವಾಗ ಆಯಾ ಧರ್ಮದ ಜನರು ಅಡ್ಡಿಪಡಿಸಿದ್ದರು. ತಾವೇ ತೆರವು ಮಾಡಿಕೊಡುತ್ತೇವೆ ಎನ್ನುವ ವಾಗ್ದಾನವನ್ನು ಮಂದಿರ ಹಾಗೂ ಮಸೀದಿ ಮಂಡಳಿ ಕಡೆಯವರು ನೀಡಿದ್ದರು.
ಗಡುವು ಮೀರಿದರೂ ತೆರವು ಮಾಡಿಕೊಳ್ಳದ ಕಾರಣ, ಈ ಸಲ ಯಾವುದೆ ಮನ್ಸೂಚನೆಯನ್ನು ಅಧಿಕಾರಿಗಳು ನೀಡಿದಂತಿಲ್ಲ. ಮಸೀದಿ ಹಾಗೂ ಮಂದಿರ ಕಟ್ಟಡಗಳ ಭಾಗವನ್ನು ಜೆಸಿಬಿ ಯಂತ್ರದಿಂದ ಒಡೆದು ಹಾಕಲಾಗಿದೆ. ಕಟ್ಟಡಗಳ ಅವಶೇಷ ಇನ್ನೂ ಎತ್ತಿ ಹಾಕಿಲ್ಲ. 
ಸರ್ಕಾರಿ ಐ.ಬಿ.ಯಿಂದ ಬಸವೇಶ್ವರ ವೃತ್ತದವರೆಗೂ ಎರಡು ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ಸಿಸಿ ರಸ್ತೆ ಮಾಡಲಾಗಿದೆ. ಇದೇ ಮಾರ್ಗದಲ್ಲಿರುವ ರಾಮಮಂದಿರ ಹಾಗೂ ಮಸೀದಿ ಇರುವ ಕಡೆ ಸಿಸಿ ರಸ್ತೆಗೆ ಹೊಂದಿಕೊಂಡು ಚರಂಡಿ ಹಾಗೂ ಪಾದರಸ್ತೆ ನಿರ್ಮಾಣ ಬಾಕಿ ಉಳಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT