ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರದ ಚಿತ್ರ 
ರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ರೈತ ನಾಯಕ ಪುಟ್ಟಣ್ಣಯ್ಯ ಅಂತ್ಯಕ್ರಿಯೆ

ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಪಾಂಡವಪುರ ತಾಲ್ಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅವರ ತೆಂಗಿನ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.

ಮಂಡ್ಯ:  ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ   ಪಾಂಡವಪುರ ತಾಲ್ಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅವರ ತೆಂಗಿನ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.

ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ರೈತರು, ಅಭಿಮಾನಿಗಳು ಕುಟುಂಬ ಸದಸ್ಯರು ಅಂತ್ಯಸಂಸ್ಕಾರಕ್ಕೆ ಸಾಕ್ಷಿಯಾದರು.

ಅಂತ್ಯ ಸಂಸ್ಕಾರವನ್ನು ಯಾವುದೇ ಧಾರ್ಮಿಕ ವಿಧಿವಿಧಾನದಿಂದ ಮಾಡದೆ ಹೋರಾಟ ಗೀತೆಯೊಂದಿಗೆ ಮಾಡಲಾಯಿತು.ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರಕ್ಕೆ ‘ಹಸಿರು ಹೊದಿಕೆ’ ಮಾಡಿ, ರಾಜ್ಯ ರೈತಸಂಘ, ಹಸಿರು ಸೇನೆ ಹಾಗೂ ನೆರದಿದ್ದ ಸಾವಿರಾರು ರೈತರು ಹಸಿರು ಶಾಲು ಬೀಸುವ ಮೂಲಕ ‘ಹಸಿರು ನಮನ’ ಸಲ್ಲಿಸಿದ್ದು ವಿಶೇಷವಾಗಿತ್ತು.

ವಿವಿಧ ಜಿಲ್ಲೆಗಳಿಂದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಾವಿರಾರು ರೈತರು ತಮ್ಮ ನೆಲದಿಂದ ಹಿಡಿ ಮಣ್ಣು ತಂದು ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರಕ್ಕೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಎನ್‌. ಮಂಜುಶ್ರೀ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದು ಸರ್ಕಾರಿ ಗೌರವ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಂ. ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರು, ಮುಖಂಡರು, ರೈತ ನಾಯಕರು ಭಾಗಿಯಾಗಿದ್ದರು.ಸ್ವರಾಜ್ ಇಂಡಿಯಾ ಪಕ್ಷದ ಮುಖಂಡ ಯೋಗೇಂದ್ರ ಯಾದವ್‌ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!