ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕ

ಉಪ ಕುಲಪತಿಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದ ರಾಜ್ಯದ 8 ವಿಶ್ವವಿದ್ಯಾಲಯಗಳ ಪೈಕಿ 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ಬೆಂಗಳೂರು: ಉಪ ಕುಲಪತಿಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದ ರಾಜ್ಯದ 8 ವಿಶ್ವವಿದ್ಯಾಲಯಗಳ ಪೈಕಿ 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ರಾಜ್ಯಪಾಲ ವಜುಭಾಯ್ ವಾಲಾ ಅವರು ಕರ್ನಾಟಕ ಜನಪದ ವಿಶ್ವವಿದ್ಯಾಲಯ ಮತ್ತು ಬೀದರ್'ನ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕಾತಿ ಕಡತಕ್ಕೆ ಸಹಿ ಹಾಕಿದ್ದಾರೆಂದು ವರದಿಗಳು ತಿಳಿಸಿವೆ. 
ಜನಪದ ವಿಶ್ವವಿದ್ಯಾಲಯದಲ್ಲಿ ಉಸ್ತುವಾರಿ ಕುಲಪತಿಯಾಗಿದ್ದ ಡಾ.ಡಿ.ಬಿ. ನಾಯ್ಕ್ ಅವರನ್ನು ಉಪ ಕುಲಪತಿಗಳಾಗಿ, ಹಾಗೂ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪೆಥಾಲಜಿ ವಿಭಾಗದಲ್ಲಿ ಪ್ರಧ್ಯಾಪಕರಾಗಿದ್ದ ಪ್ರೊ.ಹೆಚ್.ಡಿ. ನಾರಾಯಣ ಸ್ವಾಮಿಯವರನ್ನು ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ ನೇಮಕ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ. 
ಇದೇ ವೇಳೆ ಶಿವಮೊಗ್ಗದ ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿಗಳ ನೇಮಕಾತಿ ವಿಚಾರ ಕುರಿತ ಕಡತವನ್ನು ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT