ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕ

ಉಪ ಕುಲಪತಿಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದ ರಾಜ್ಯದ 8 ವಿಶ್ವವಿದ್ಯಾಲಯಗಳ ಪೈಕಿ 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ಬೆಂಗಳೂರು: ಉಪ ಕುಲಪತಿಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದ ರಾಜ್ಯದ 8 ವಿಶ್ವವಿದ್ಯಾಲಯಗಳ ಪೈಕಿ 2 ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ರಾಜ್ಯಪಾಲ ವಜುಭಾಯ್ ವಾಲಾ ಅವರು ಕರ್ನಾಟಕ ಜನಪದ ವಿಶ್ವವಿದ್ಯಾಲಯ ಮತ್ತು ಬೀದರ್'ನ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳ ನೇಮಕಾತಿ ಕಡತಕ್ಕೆ ಸಹಿ ಹಾಕಿದ್ದಾರೆಂದು ವರದಿಗಳು ತಿಳಿಸಿವೆ. 
ಜನಪದ ವಿಶ್ವವಿದ್ಯಾಲಯದಲ್ಲಿ ಉಸ್ತುವಾರಿ ಕುಲಪತಿಯಾಗಿದ್ದ ಡಾ.ಡಿ.ಬಿ. ನಾಯ್ಕ್ ಅವರನ್ನು ಉಪ ಕುಲಪತಿಗಳಾಗಿ, ಹಾಗೂ ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪೆಥಾಲಜಿ ವಿಭಾಗದಲ್ಲಿ ಪ್ರಧ್ಯಾಪಕರಾಗಿದ್ದ ಪ್ರೊ.ಹೆಚ್.ಡಿ. ನಾರಾಯಣ ಸ್ವಾಮಿಯವರನ್ನು ಪಶುವೈದ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ ನೇಮಕ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ. 
ಇದೇ ವೇಳೆ ಶಿವಮೊಗ್ಗದ ತೋಟಗಾರಿಕಾ ವಿಶ್ವವಿದ್ಯಾಲಯದ ಉಪಕುಲಪತಿಗಳ ನೇಮಕಾತಿ ವಿಚಾರ ಕುರಿತ ಕಡತವನ್ನು ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT