ಸಾಂದರ್ಭಿಕ ಚಿತ್ರ 
ರಾಜ್ಯ

ಕೊಡಗಿನಲ್ಲಿ ಮುಂದುವರೆದ ನಕ್ಸಲ್ ಕಾರ್ಯಾಚರಣೆ

ಭಾಗಮಂಡಲ ವಲಯದ ಕಾಕಬೇ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ಮತ್ತು ಎಎನ್ ಎಫ್ ತಂಡ ನಕ್ಸಲರಿಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಿದೆ...

ಮಡಿಕೇರಿ: ಭಾಗಮಂಡಲ ವಲಯದ ಕಾಕಬೇ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ಮತ್ತು ಎಎನ್ ಎಫ್ ತಂಡ ನಕ್ಸಲರಿಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಿದೆ, ನಾಪೋಕ್ಲುವಿನ ನಳದಿಯ ಮನೆಯೊಂದಕ್ಕೆ ನಕ್ಸಲರು ಸೋಮವಾರ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಕೂಂಬಿಂಗ್ ಆರಂಭವಾಗಿದೆ.
ಕೊಡಗಿನ ಕೊಯನಾಡುಗೆ ಕಳೆದ 15 ದಿನಗಳ ಹಿಂದೆ ನಕ್ಸಲ್ ತಂಡ ಭೇಟಿ ನೀಡಿತ್ತು, ಹಾಗೂ ದಕ್ಷಿಣ ಕನ್ನಡ ಗಡಿಯ ನಾಪೋಕ್ಲುಗೆ ಕೂಡ ನಕ್ಸಲ್ ತಂಡ ಭೇಟಿ ನೀಡಿತ್ತು. ನಕ್ಸಲ್ ತಂಡ ಕಾಫಿ ಬೆಳೆಗಾರ ಮುತ್ತನ್ನ ಎಸ್ಟೇಟ್ ಮತ್ತು ಬರಹಗಾರ ಪೆಮ್ಮಯ್ಯ ಮನೆಗೆ  ಸಂಜೆ 5.30ರ ವೇಳೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.
ತಮ್ಮನ್ನು ನಕ್ಸಲರೆಂದು ಹೇಳಿಕೊಂಡ ತಂಡ ಕುಟುಂಬದ ಸದಸ್ಯರಿಗೆ ಹಂದಿ ಮಾಂಸದ ಅಡುಗೆ ಮಾಡುವಂತೆ ಕೇಳಿದೆ, ಊಟ ಮುಗಿಸಿ ರಾತ್ರಿ 10.30ರ ವೇಳೆಗೆ ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT