ನಾರಾಯಣಸ್ವಾಮಿ 
ರಾಜ್ಯ

ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಎರಚಿ, ಧಮ್ಕಿ ಹಾಕಿದ್ದ ನಾರಾಯಣಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ

ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿ, ಧಮ್ಕಿ ಹಾಕಿದ್ದ ಕೆಆರ್ ಪುರಂನ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ...

ಬೆಂಗಳೂರು: ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿ, ಧಮ್ಕಿ ಹಾಕಿದ್ದ ಕೆಆರ್ ಪುರಂನ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಅವರಿಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 
ಕಳೆದ ಫೆಬ್ರವರಿ 16ರಂದು ಹೊರಮಾವು ಬಿಬಿಎಂಪಿ  ಕಚೇರಿಗೆ ನುಗ್ಗಿ  ಪೆಟ್ರೋಲ್ ಸುರಿದು ಬೆಂಕಿ ಹಾಕುವುದಾಗಿ ನಾರಾಯಣ ಸ್ವಾಮಿ ಬೆದರಿಕೆ ಹಾಕಿದ್ದರು.  ಬಳಿಕ ತಲೆ ಮರೆಸಿಕೊಂಡಿದ್ದ ನಾರಾಯಣಸ್ವಾಮಿ ಇಂದು ರಾಮಮೂರ್ತಿ ನಗರ ಪೊಲೀಸರಿಗೆ ಶರಣಾಗಿದ್ದರು. 
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.  ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ನಾರಾಯಣ ಸ್ವಾಮಿ, ಇಂದು ಬೆಳಗ್ಗೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು.
ನಾರಾಯಣ ಸ್ವಾಮಿ, ಜಮೀನು ಖಾತೆ ಮಾಡಿಕೊಡದಿದ್ದರೆ ಕಚೇರಿಗೆ ಬೆಂಕಿ ಹಚ್ಚುವುದಾಗಿ ಅಲ್ಲಿದ್ದ ಅಧಿಕಾರಿಗಳನ್ನು ಬೆದರಿಸಿದ್ದರು. ಆಪ್ತನ ಕೈಯಲ್ಲಿದ್ದ  ಪೆಟ್ರೋಲ್ ಬಾಟಲ್ ಅನ್ನು ಕಿತ್ತುಕೊಂಡು ಕಚೇರಿಯ ಕಡತಗಳಿರುವ ಕವಾಟಿಗೆ ನಾರಾಯಣ ಸ್ವಾಮಿ ಪೆಟ್ರೋಲ್ ಎರಚಿದ್ದರು. ಕೆ ಆರ್ ಪುರಂ ಶಾಸಕ ಭೈರತಿ ಬಸವರಾಜ್ ಅವರ ಆಪ್ತರಾಗಿರುವ ಜಲಮಂಡಳಿ ಸದಸ್ಯ ನಾರಾಯಣ  ಸ್ವಾಮಿಯ ಗೂಂಡಾಗಿರಿ ವರ್ತನೆಯ ವಿಡಿಯೊ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿತ್ತು. 
ನಾರಾಯಣಸ್ವಾಮಿ ಮೇಲೆ ಐಪಿಸಿ ಸೆಕ್ಷನ್‌ 353,427, 341,504, 506 ಅಡಿ ಕೇಸುಗಳನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT